ಇಡುಕ್ಕಿ ಭೂಕುಸಿತದ ಭೀಕರತೆ; ಇಂದು 16 ಶವಗಳನ್ನು ಮಣ್ಣಿನಡಿಯಿಂದ ಹೊರತೆಗೆದ ರಕ್ಷಣಾ ಸಿಬ್ಬಂದಿ

ಇಡುಕ್ಕಿ: ಮುನ್ನಾರ್​ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 45ಕ್ಕೆ ಏರಿಕೆಯಾಗಿದೆ. ಇಂದು 16 ಶವಗಳನ್ನು ಮಣ್ಣಿನಡಿಯಿಂದ ಹೊರಗೆ ತೆಗೆಯಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಆಗಸ್ಟ್​ 7ರಂದು ಈ ಭೀಕರ ಭೂಕುಸಿತ ಸಂಭವಿಸಿದೆ. ಅಂದಿನಿಂದಲೂ ಎನ್​ಡಿಆರ್​ಎಫ್​ ಸಿಬ್ಬಂದಿ ಸೇರಿ ಹಲವರು ಮಣ್ಣಿನಡಿ ಇರುವ ಶವಗಳನ್ನು ತೆಗೆಯುವ ಕಾರ್ಯಾಚರಣೆ ನಡೆಸುತ್ತಿವೆ. ದಿನೇದಿನೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಕೇಂದ್ರ ಸಚಿವ ವಿ. ಮುರಳಿಧರನ್​ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭೂಕುಸಿತದಲ್ಲಿ ಮೃತರಾದವರ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದ … Continue reading ಇಡುಕ್ಕಿ ಭೂಕುಸಿತದ ಭೀಕರತೆ; ಇಂದು 16 ಶವಗಳನ್ನು ಮಣ್ಣಿನಡಿಯಿಂದ ಹೊರತೆಗೆದ ರಕ್ಷಣಾ ಸಿಬ್ಬಂದಿ