ಪಶ್ಚಿಮ ಬಂಗಾಳ: ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಲು ವಾರಾಣಸಿ ನ್ಯಾಯಾಲಯ ಬುಧವಾರ ಅನುಮತಿ ನೀಡಿದ ಬೆನ್ನಲ್ಲೇ, ಹಿಂದೂ ಅರ್ಚಕರ ಕುಟುಂಬದವರು ಪೂಜಾ ಕಾರ್ಯ ನಡೆಸಿದ್ದಾರೆ. ಇದರಿಂದ ದೇಶದ ಹಲವು ಕಡೆ ಮುಸ್ಲಿಮರಿಂದ ವಿರೋಧ ವ್ಯಕ್ತವಾಗಿದೆ.
ಇದನ್ನೂ ಓದಿ:ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಆತಂಕ ಬೇಡ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಮುಖಂಡರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
Puja started at gyanvyapi pic.twitter.com/ZjcWYnklCG
— Vishnu Shankar Jain (@Vishnu_Jain1) February 1, 2024
ಜ್ಞಾನವಾಪಿ ಮಸೀದಿ ಮುಸ್ಲಿಂ ಸಮುದಾಯಕ್ಕೆ ಬಿಟ್ಟುಕೊಡಬೇಕು ಎಂದು ಆಗ್ರಹಿಸಿ ಶನಿವಾರ ಉಲಾಮೆ-ಎ-ಹಿಂದ್ ಸಂಘಟನೆ ವತಿಯಿಂದ ರ್ಯಾಲಿಯಲ್ಲಿ ಮಾತನಾಡಿದ ಟಿಎಂಸಿ ಮುಖಂಡ ಸಿದ್ಧಿಖುಲ್ಲಾ ಚೌದರಿ, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಪಶ್ಚಿಮ ಬಂಗಾಳಕ್ಕೆ ಬಂದರೆ ಅವರನ್ನು ನಾವು ಸುತ್ತುವರೆಯುತ್ತೇವೆ ಎಂದು ಬೆದರಿಕೆ ಹಾಕಿದರು.
ಹಿಂದೂಗಳು ಬಲವಂತವಾಗಿ ಮಸೀದಿಯಲ್ಲಿ ಪೂಜೆ ಮಾಡಲು ಪ್ರಾರಂಭಿಸಿದ್ದಾರೆ. ತಕ್ಷಣವೇ ಜ್ಞಾನವಾಪಿ ಮಸೀದಿಯನ್ನು ಖಾಲಿ ಮಾಡಿ. ನಾವು ಯಾವುದೇ ದೇವಸ್ಥಾನಕ್ಕೆ ಪ್ರಾರ್ಥನೆ ಸಲ್ಲಿಸಲು ಹೋಗುವುದಿಲ್ಲ ಎಂದು ಟಿಎಂಸಿ ನಾಯಕ ಹೇಳಿದರು. ಹಾಗಾದರೆ ಅವರು ನಮ್ಮ ಮಸೀದಿಗಳಿಗೆ ಏಕೆ ಬರುತ್ತಿದ್ದಾರೆ? ಮಸೀದಿ ಎಂದರೆ ಮಸೀದಿ, ಯಾರಾದರೂ ಮಸೀದಿಯನ್ನು ದೇವಸ್ಥಾನವಾಗಿ ಪರಿವರ್ತಿಸಲು ಬಯಸಿದರೆ, ನಾವು ಸುಮ್ಮನೆ ಕುಳಿತುಕೊಳ್ಳುವುದಿಲ್ಲ ಉಗ್ರ ಹೋರಾಟ ಮಾಡುತ್ತೇವೆ ಎಂದು ಆಗ್ರಹಿಸಿದರು.
ಚೌಧರಿ ಅವರ ಹೇಳಿಕೆಗೆ ತಿರುಗೇಟು ನೀಡಿದ ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಟಿಎಂಸಿ ಮುಖ್ಯಸ್ಥೆ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಪಶ್ಚಿಮ ಬಂಗಾಳವು ಒಂದು ಸಮುದಾಯದ ರಕ್ಷಕನಾಗಿ ಮಾರ್ಪಟ್ಟಿದೆ ಎಂದು ಹೇಳಿದರು. ಯೋಗಿ ಆದಿತ್ಯನಾಥ್ ಒಬ್ಬ ಸನಾತನಿ ಪುತ್ರ, ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ಸಚಿವ ಯೋಗಿ ಆದಿತ್ಯನಾಥ್ಗೆ ಬೆದರಿಕೆ ಹಾಕಿರುವುದು ದೇಶಕ್ಕೆ ಸ್ವೀಕಾರಾರ್ಹವಲ್ಲ, ಯೋಗಿಯನ್ನು ಬಂಗಾಳಕ್ಕೆ ಹೋಗುವುದನ್ನು ತಡೆಯುವ ಧೈರ್ಯ ಅವರಿಗಿಲ್ಲ ಎಂದು ಅವರು ಹೇಳಿದ್ದಾರೆ.
ವಾರಣಾಸಿ ಜಿಲ್ಲಾ ನ್ಯಾಯಾಲಯವು ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿರುವ ವಿಗ್ರಹಗಳ ಮುಂದೆ ಪಾದ್ರಿಗಳು ಪ್ರಾರ್ಥನೆ ಸಲ್ಲಿಸಬಹುದು ಎಂಬ ತೀರ್ಪಿನ ವಿರುದ್ಧ ಜ್ಞಾನವಾಪಿ ಮಸೀದಿ ಸಮಿತಿಯ ಮನವಿಯ ವಿಚಾರಣೆಯನ್ನು ಫೆಬ್ರವರಿ 15 ಎಂದು ನಿಗದಿಪಡಿಸಿದೆ.
‘ಒಂದು ದೇಶ ಒಂದು ಚುನಾವಣೆ’ ವರದಿ ಮಾರ್ಚ್ನಲ್ಲಿ ಬಿಡುಗಡೆ: ಅಮಿತ್ ಶಾ