ಬೆಂಗಳೂರು: ನನಗೆ ತಲೆಕೆಟ್ಟಿಲ್ಲ. ನಾನು ಸಂದರ್ಶನದಲ್ಲಿ ಸತ್ಯ ಮಾತನಾಡಿರುವುದನ್ನು ಹಾಗೂ ನನ್ನ ರಾಜಕೀಯ ನಿಲುವನ್ನು ನೋಡಿ ಬಿಜೆಪಿಯವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ನಾನು ಸಂವಿಧಾನ ಬದಲಿಸುತ್ತೇನೆ ಎಂದು ಎಲ್ಲಿ ಹೇಳಿದ್ದೇನೆ? ನಾನು ಹೇಳಿದ್ದರೆ ಅದನ್ನು ಒಪ್ಪಿಕೊಳ್ಳುತ್ತಿದ್ದೆ ಎಂದು ಡಿಸಿಎಂ DK ಶಿವಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ:ಸೋನು ಸೂದ್ ಪತ್ನಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ! ಗಾಯಗೊಂಡ ಸೋನಾಲಿ, ಸುನಿತಾ ಆಸ್ಪತ್ರೆಗೆ ದಾಖಲು
ಸಂವಿಧಾನ ಜಾರಿಗೆ ತಂದವರು ನಾವು, ನಾವು ಅದನ್ನು ರಕ್ಷಣೆ ಮಾಡುತ್ತಿದ್ದೇವೆ. ಬಿಜೆಪಿಯವರು ತಮ್ಮ ಹುಳುಕುಗಳನ್ನು ಮುಚ್ಚಿಹಾಕಲು ಈ ವಿಚಾರ ಪ್ರಸ್ತಾಪಿಸಿದ್ದಾರೆ. ನಮ್ಮ ನಾಯಕರು ದಡ್ಡರಲ್ಲ, ನಾನು ಏನು ಮಾತನಾಡಿದ್ದೇನೆ ಎಂದು ಅವರು ನೋಡಿದ್ದಾರೆ. ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿರುವುದು ಬಿಜೆಪಿ ಪಕ್ಷದ ನಾಯಕರು. ನಾನು ಸಂವಿಧಾನ ಬದಲಿಸುತ್ತೇನೆ ಎಂದು ಹೇಳಿದ್ದರೆ ಇಂದೇ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ನನ್ನ ಹೇಳಿಕೆ ತೆಗೆಸಿ ನೋಡಲಿ. ಬಿಜೆಪಿ ಅವರ ಆರೋಪದಲ್ಲಿ ಯಾವ ಅರ್ಥವೂ ಇಲ್ಲ. ನನ್ನ ಸಂದರ್ಶನವನ್ನು ಪೂರ್ಣವಾಗಿ ನೋಡಿ, ನಾನು ಅಲ್ಲಿ ಏನು ಮಾತನಾಡಿದ್ದೇನೆ ಎಂದು ಕೇಳಿ ಎಂದು ಮಾಧ್ಯಮ ಹಾಗೂ ರಾಜಕೀಯ ಸ್ನೇಹಿತರಲ್ಲಿ ಮನವಿ ಮಾಡುತ್ತೇನೆ” ಎಂದು ಬೆಂಗಳೂರಿನ ಕುಮಾರಪಾರ್ಕ್ ನಲ್ಲಿರುವ ಸರಕಾರಿ ಗೃಹ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು.
ಇದನ್ನೂ ಓದಿ:ಏಪ್ರಿಲ್ 17, 300 ರನ್ ದಾಖಲೆ; ಐಪಿಎಲ್ ಶುರುವಿನ ಬೆನ್ನಲ್ಲೇ ಡೇಲ್ ಸ್ಟೇನ್ ಭವಿಷ್ಯ ನುಡಿ | Dale Steyn
ಈ ವಿಚಾರವಾಗಿ ದೆಹಲಿ ನಾಯಕರು ನಿಮ್ಮ ಬಳಿ ಸ್ಪಷ್ಟನೆ ಕೇಳಿದ್ದಾರಾ ಎಂದು ಕೇಳಿದಾಗ, “ಹೌದು, ನನಗೆ ಕೇಳಿದ್ದಾರೆ. ನಾನು ದಾಖಲೆ ತೆಗೆದು ನೋಡಿ ಎಂದು ಹೇಳಿದ್ದೆ. ಅವರು ನೋಡಿದ್ದು, ನಂತರ ಅವರಿಗೆ ನಾನು ಹಾಗೇ ಹೇಳಿಲ್ಲ ಎಂಬುದರ ಅರಿವಾಗಿದೆ” ಎಂದರು.
ನೀವು ಹೋದ ಕಡೆ ಕಪ್ಪು ಬಾವುಟ ಪ್ರದರ್ಶಿಸಲು ಬಿಜೆಪಿಯವರು ನಿರ್ಧರಿಸಿದ್ದಾರಂತೆ ಎಂದು ಕೇಳಿದಾಗ, “ಅವರಿಗೆ ನನ್ನ ಮೇಲೆ ವಿಶೇಷ ಪ್ರೀತಿ. ನನ್ನ ಬಗ್ಗೆ ಮಾತನಾಡದಿದ್ದರೆ, ಅವರಿಗೆ ನಿದ್ದೆ ಬರುವುದಿಲ್ಲ. ಅದಕ್ಕಾಗಿ ಮಾತನಾಡುತ್ತಾರೆ, ಮಾತನಾಡಲಿ. ತಮಿಳುನಾಡಿನಲ್ಲಿ ಕಪ್ಪು ಬಾವುಟ ನೋಡಬೇಕು ಎಂದು ಕಾದು ಕುಳಿತಿದ್ದೆ. ನನಗೆ ಮಾಧ್ಯಮಗಳ ಮೈಕ್ ಹೊರತಾಗಿ ಯಾವ ಕಪ್ಪು ಬಾವುಟವೂ ಕಾಣಲಿಲ್ಲ” ಎಂದು ತಿಳಿಸಿದರು.
ಶ್ರೀಗಳ ಫೋನ್ ಟ್ಯಾಪಿಂಗ್ ಪ್ರಕರಣದ ಸಿಬಿಐ ವರದಿ ಏನಾಯ್ತು?
ಫೋನ್ ಟ್ಯಾಪಿಂಗ್ ವಿಚಾರ ಮತ್ತೆ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, “ನಾನು ಜೈಲಲ್ಲಿ ಇದ್ದಾಗ, ನಮ್ಮ ನಿರ್ಮಲಾನಂದ ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನಡೆದಿದೆ ಎಂಬ ಸುದ್ದಿ ಓದಿದ್ದೆ. ಅದಾದ ನಂತರ ತನಿಖೆ, ಏನೇನೋ ನಡೆಯಿತು. ಈ ವಿಚಾರವಾಗಿ ಸಿಬಿಐ ತನಿಖೆ ಮಾಡಿತ್ತು. ಬಿಜೆಪಿಯವರು ಸಿಬಿಐ ವರದಿಯನ್ನು ಪ್ರಕಟಿಸಲಿ, ಆಮೇಲೆ ಮಿಕ್ಕ ವಿಚಾರ ಮಾತನಾಡೋಣ” ಎಂದರು.
ಇದನ್ನೂ ಓದಿ:ಬಾಬಾ ವಂಗಾ ಭವಿಷ್ಯವಾಣಿ: ಈ 5 ರಾಶಿಯವರ ಜೀವನದಲ್ಲಿ ದೊಡ್ಡ ಬದಲಾವಣೆಯಾಗಲಿವೆ | Zodiac Signs
ಸಿಎಂ, ಗೃಹಮಂತ್ರಿಗಳಿಂದ ಎಲ್ಲರಿಗೂ ನ್ಯಾಯ
ರಾಜಣ್ಣ ಅವರು ಹನಿಟ್ರ್ಯಾಪ್ ವಿಚಾರವಾಗಿ ಗೃಹ ಮಂತ್ರಿಗೆ ದೂರು ನೀಡಲು ಮುಂದಾಗಿದ್ದಾರಲ್ಲ ಎಂದು ಕೇಳಿದಾಗ, “ಗೃಹ ಸಚಿವರು ಬಹಳ ಹಿರಿಯರು. ಅವರಿಗೆ ಪಕ್ಷ ನಡೆಸಿ, ಜತೆಗೆ ಸರ್ಕಾರದಲ್ಲೂ ಅನುಭವವಿದೆ. ಅವರು ಹಾಗೂ ಮುಖ್ಯಮಂತ್ರಿಗಳು ಎಲ್ಲಾ ರೀತಿಯ ತನಿಖೆ ನಡೆಸುವುದಾಗಿ ಸದನದಲ್ಲಿ ಹೇಳಿದ್ದು, ರಾಜಣ್ಣ ಅವರಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಯಾವ ರೀತಿ ನ್ಯಾಯ ಒದಗಿಸಬೇಕೋ ಒದಗಿಸುತ್ತಾರೆ” ಎಂದು ತಿಳಿಸಿದರು.