ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗನದಲ್ಲಿ ನಡೆದ 17ನೇ ಆವೃತ್ತಿಯ 64ನೇ ಐಪಿಎಲ್ ಪಂದ್ಯದಲ್ಲಿ ಆಲ್ರೌಂಡ್ ಪ್ರದರ್ಶನದ ಫಲವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಲಖನೌ ಸೂಪರ್ಜೈಂಟ್ಸ್ ವಿರುದ್ಧ ಜಯ ಸಾಧಿಸಿದ್ದು, ಪ್ಲೇಆಫ್ ಆಸೆಯನ್ನು ಸ್ವಲ್ಪಮಟ್ಟಿಗೆ ಜೀವಂತವಾಗಿರಿಸಿಕೊಂಡಿದೆ. ಇನ್ನೂ ಪಂದ್ಯದ ಬಳಿಕ ಮಾತನಾಡಿದ ರಿಷಭ್ ಪಂತ್ ಅಚ್ಚರಿಯ ಹೇಳಿಕೆ ಕೋಡುವ ಮೂಲಕ ಸುದ್ದಿಯಾಗಿದ್ದಾರೆ.

ನಿಯಮ ಉಲ್ಲಂಘನೆ ಕಾರಣ ರಿಷಭ್ ಪಂತ್ಗೆ ಬಿಸಿಸಿಐ ದಂಡ ವಿಧಿಸಿ ಒಂದು ಪಂದ್ಯ ಆಡದಂತೆ ನಿಷೇಧ ಹೇರಿತ್ತು. ಈ ಕಾರಣಕ್ಕಾಗಿ ಅವರು ಆರ್ಸಿಬಿ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಲಖನೌ ವಿರುದ್ಧದ ಗೆಲುವಿನ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ನಲ್ಲಿ ಈ ಕುರಿತು ಮಾತನಾಡಿದ ರಿಷಭ್ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ಪ್ರೀತಿಸಲು ನಿರಾಕರಣೆ; ಹುಬ್ಬಳ್ಳಿಯಲ್ಲಿ ನಡೆಯಿತು ನೇಹಾ ಮಾದರಿಯ ಮತ್ತೊಂದು ಹತ್ಯೆ
ಆರ್ಸಿಬಿ ವಿರುದ್ಧದ ಪಂದ್ಯದಲ್ಲಿ ನಾನು ಕಣಕ್ಕಿಳಿದಿದ್ದರೆ ನಾವು ಗೆಲ್ಲುವ ಸಾಧ್ಯತೆ ಹೆಚ್ಚಿರುತ್ತಿತ್ತು. ನಾನು ಆಡಿದ್ದರೆ ನಾವು ಖಂಡಿತವಾಗಿಯೂ ಪಂದ್ಯವನ್ನು ಗೆಲ್ಲುತ್ತಿದ್ದೆವು ಎಂದು ನಾನು ಹೇಳುತ್ತಿಲ್ಲ. ಆದರೆ, ಕೊನೆಯ ಪಂದ್ಯದಲ್ಲಿ ನನಗೆ ಆಡಲು ಅವಕಾಶವಿದ್ದರೆ ನಮಗೆ ಪ್ಲೇ ಆಫ್ಗೆ ಅರ್ಹತೆ ಪಡೆಯುವ ಉತ್ತಮ ಅವಕಾಶವಿತ್ತು ಎಂದು ಪರೋಕ್ಷವಾಗಿ ಬಿಸಿಸಿಐ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಪೂರನ್ ನಮಗೆ ಕೆಲಕಾಲ ತೊಂದರೆ ಕೊಟ್ಟರು ನಮ್ಮ ಬೌಲಿಂಗ್ ಕೂಡ ಚೆನ್ನಾಗಿ ಸಾಗುತ್ತಿತ್ತು. ಈ ಋತುವಿನಲ್ಲಿ ನಾವು ಬಹಳಷ್ಟು ನಿರೀಕ್ಷೆಗಳೊಂದಿಗೆ ಕಣಕ್ಕಿಳಿದೆವು. ಆದರೆ, ಕೆಲವು ಆಟಗಾರರು ಗಾಯಗೊಂಡಿದ್ದಾರೆ. ಕೊನೆಯ ಪಂದ್ಯದಲ್ಲಿ ಸೋತ ನಂತರವೂ ನಾವು ಪ್ಲೇ ಆಫ್ ರೇಸ್ನಲ್ಲಿಯೇ ಇದ್ದೇವೆ. ಈ ಜಯದ ಮೂಲಕ ಕಮ್ಬ್ಯಾಕ್ ಮಾಡಿರುವುದು ಉತ್ತಮವಾಗಿದೆ. ಒಂದೂವರೆ ವರ್ಷದ ನಂತರ ಕ್ರಿಕೆಟ್ಗೆ ಮರಳಿದ್ದೇನೆ. ನಾನು ಸದಾ ಮೈದಾನದಲ್ಲಿ ಇರಲು ಬಯಸುತ್ತೇನೆ ಎಂದು ಪೋಸ್ಟ್ ಮ್ಯಾಚ್ ಪ್ರಸೆಂಟೇಷನ್ನಲ್ಲಿ ರಿಷಭ್ ಪಂತ್ ಹೇಳಿದ್ದಾರೆ.