‘ಒಮ್ಮೆ ಯುದ್ಧ ಶುರುವಾದರೆ ಭಾರತಕ್ಕೆ ಸೋಲು ನಿಶ್ಚಿತ’- ಮತ್ತೆ ಬೆಂಕಿಗೆ ತುಪ್ಪ ಸುರಿದ ಚೀನಾ

blank

ನವದೆಹಲಿ: ಶಾಂಘೈ ಸಹಕಾರ ಸಂಘದ ಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಕ್ಕೆ ಹೋಗಿರುವ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಅವರು, ಅಲ್ಲಿ ಚೀನಾದ ರಕ್ಷಣಾ ಸಚಿವ ಜನರಲ್​ ವೈ ಫೆಂಗಿ ಅವರನ್ನು ಭೇಟಿಯಾಗಿದ್ದಾರೆ.

ವಾಸ್ತವಿಕ ಗಡಿ ನಿಯಂತ್ರಣಾ ರೇಖೆ ಬಳಿ ಎರಡೂ ದೇಶಗಳ ನಡುವೆ ನಡೆಯುತ್ತಿರುವ ಸಂಘರ್ಷದ ಬಗ್ಗೆಯೂ ಮಾತುಕತೆ ನಡೆದಿದೆ ಎನ್ನಲಾಗಿದೆ. ಈ ವೇಳೆ ರಾಜನಾಥ್​ ಸಿಂಗ್​ ಅವರು ಚೀನಾ ಅಂತಾರಾಷ್ಟ್ರೀಯ ಗಡಿಯಲ್ಲಿ ಶಿಸ್ತು ಪಾಲನೆ ಮಾಡಬೇಕು. ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾವಣೆ ಮಾಡಲು ಮುಂದಾಗಬಾರದು ಎಂದೂ ಖಡಕ್​ ಆಗಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇಷ್ಟೆಲ್ಲ ಆದಮೇಲೆ ಕೂಡ ಚೀನಾ ಯುದ್ಧದ ಬಗ್ಗೆ ಮಾತನಾಡುತ್ತಿದೆ. ಒಂದೊಮ್ಮೆ ಯುದ್ಧ ಶುರುವಾದರೆ ಭಾರತಕ್ಕೆ ಗೆಲ್ಲುವ ಅವಕಾಶವೇ ಇಲ್ಲ ಎಂದು ಅಲ್ಲಿನ ಮಾಧ್ಯಮವೊಂದು ವಿಶ್ಲೇಷಿಸಿದೆ. ಇದನ್ನೂ ಓದಿ: ವೈದ್ಯ ವೃತ್ತಿ ಬಿಟ್ಟು ಆಟೋ ಚಾಲಕರಾದ್ರು​: ಐಎಎಸ್​ ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ!

ಚೀನಾದ ರಾಷ್ಟ್ರೀಯತೆಯ ಶಕ್ತಿ, ಸೇನಾ ಶಕ್ತಿಗಳು ಭಾರತಕ್ಕಿಂತ ಪ್ರಬಲವಾಗಿವೆ ಎಂಬುದನ್ನು ನಾವು ಮತ್ತೊಮ್ಮೆ ನೆನಪಿಸಲು ಬಯಸುತ್ತೇವೆ. ಭಾರತ ಮತ್ತು ಚೀನಾ ಎರಡೂ ದೇಶಗಳು ಮಹಾನ್​ ಶಕ್ತಿಗಳೇ ಆಗಿದ್ದರೂ ಕೂಡ, ಯುದ್ಧ ಎಂದು ಕೊನೆಯ ಸ್ಪರ್ಧೆಗೆ ಬಂದಾಗ ಭಾರತ ಖಂಡಿತ ಸೋಲುತ್ತದೆ. ಒಂದೊಮ್ಮೆ ಗಡಿಯುದ್ಧ ಶುರುವಾದರೆ ಭಾರತ ಗೆಲ್ಲಲು ಅವಕಾಶವೇ ಇಲ್ಲ ಎಂದು ಚೀನಾ ಸರ್ಕಾರದ ಮುಖವಾಣಿ, ಪ್ರಮುಖ ಮಾಧ್ಯಮ ಗ್ಲೋಬಲ್​ ಟೈಮ್ಸ್​ ತನ್ನ ಸಂಪಾದಕೀಯದಲ್ಲಿ ಬರೆಯಲಾಗಿದೆ.

ರಷ್ಯಾದಲ್ಲಿ ಎರಡೂ ದೇಶಗಳ ರಕ್ಷಣಾ ಮಂತ್ರಿಗಳೂ ಭೇಟಿಯಾಗಿ 2 ತಾಸಿಗೂ ಅಧಿಕ ಕಾಲ ಚರ್ಚೆ ನಡೆಸಿರುವುದು ಉಭಯ ದೇಶಗಳ ಪಾಲಿಗೆ ಮಹತ್ವದ ತಿರುವು. ಗಡಿಯಲ್ಲಿ ಉಂಟಾಗಿರುವ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಎರಡೂ ದೇಶಗಳೂ ಪ್ರಯತ್ನ ಮಾಡುತ್ತವೆ ಎಂಬ ನಂಬಿಕೆ ಇದೆ ಎಂದೂ ಸಂಪಾದಕೀಯದಲ್ಲಿ ಬರೆಯಲಾಗಿದೆ. (ಏಜೆನ್ಸೀಸ್​)

ಮೃತ ನಟ ಸುಶಾಂತ್​ ಸಿಂಗ್​ ರಜಪೂತ್​ ಮನೆಯ ಕೆಲಸದವನು ಅರೆಸ್ಟ್​…!

Share This Article

astrology : ಈ ದಿನ ಉಗುರು, ಕೂದಲನ್ನು ಕತ್ತರಿಸಿದ್ರೆ ಕಾದಿದೆ ಸಂಕಷ್ಟ! ಈ ಕೆಲಸಕ್ಕೂ ಇದೆ ಒಳ್ಳೆಯ ದಿನ

astrology: ವಾರದ ಕೆಲವು ದಿನಗಳಲ್ಲಿ ಉಗುರುಗಳನ್ನು ಕತ್ತರಿಸುವುದು ಮತ್ತು ಕೂದಲನ್ನು ಕತ್ತರಿಸುವು ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ. …

27 ವರ್ಷದ ನಂತ್ರ ಪೂರ್ವ ಭಾದ್ರಪದ ನಕ್ಷತ್ರದಲ್ಲಿ ಶನಿ ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ | Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…

ಈ ಲಕ್ಷಣಗಳು ಕಾಣಿಸಿಕೊಂಡರೆ ನಿಮ್ಮ ಲಿವರ್​ ಹಾಳಾಗಲು ಶುರುವಾಗಿದೆ ಎಂದರ್ಥ! ಕೂಡಲೇ ಎಚ್ಚೆತ್ತುಕೊಳ್ಳಿ | Liver Health

Liver Health : ಹೃದಯ, ಶ್ವಾಸಕೋಶ ಮತ್ತು ಮೂತ್ರಪಿಂಡಗಳ ಜೊತೆಗೆ ಯಕೃತ್ತು ಕೂಡ ಮಾನವ ದೇಹದಲ್ಲಿ…