More

    ‘ಧೈರ್ಯವಿದ್ದರೆ ಕಿಸಾನ್​ ಬಾತ್​, ಜಾಬ್​ ಕಿ ಬಾತ್​ ಮಾಡಿ’ ಮೋದಿಗೆ ಸವಾಲೆಸೆದ ರಾಹುಲ್​ ಗಾಂಧಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಮನ್​ ಕಿ ಬಾತ್​ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಆದರೆ ಅವರ ಕಾರ್ಯಕ್ರಮಕ್ಕೂ ಕೆಲ ಹೊತ್ತು ಮೊದಲೇ ಟ್ವಿಟ್ಟರ್​ನಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಪ್ರಧಾನಿಗೆ ಸವಾಲೊಂದನ್ನು ಹಾಕಿದ್ದಾರೆ.

    ನಿಮಗೆ ಧೈರ್ಯವಿದ್ದರೆ ಮನ್​ ಕಿ ಬಾತ್​ ಬದಲು ಕಿಸಾನ್​ ಬಾತ್​ ಮತ್ತು ಜಾಬ್​ ಕಿ ಬಾತ್​ ಕಾರ್ಯಕ್ರಮ ಮಾಡಿ ಅದರ ಬಗ್ಗೆ ಮಾತನಾಡಿ ಎಂದು ರಾಹುಲ್​ ಗಾಂಧಿ ಟ್ವಿಟ್ಟರ್​ನಲ್ಲಿ ಹೇಳಿದ್ದಾರೆ. ಕೇಂದ್ರದಲ್ಲಿ ವಿರೋಧಿ ಪಕ್ಷದ ಸ್ಥಾನದಲ್ಲಿರುವ ಕಾಂಗ್ರೆಸ್​ ತನ್ನ ಸಾಮಾಜಿಕ ಜಾಲತಾಣಗಳ ಮೂಲಕ ಆಡಳಿತ ಪಕ್ಷವನ್ನು ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳಲಾರಂಭಿಸಿದೆ.

    ಈ ಹಿಂದೆ ರೈತ ಹೋರಾಟದ ಕುರಿತಾಗಿಯೂ ರಾಹುಲ್​ ಗಾಂಧಿಯವರು ಕೇಂದ್ರ ಸರ್ಕಾರದ ವಿರುದ್ಧ ಹರಿ ಹಾಯ್ದಿದ್ದರು. ಇದೀಗ ದೇಶದಲ್ಲಿ ಹೆಚ್ಚುತ್ತಿರುವ ಇಂಧನ ಬೆಲೆ ಮತ್ತು ಹೆಚ್ಚುತ್ತಿರುವ ನಿರೋದ್ಯೋಗ ಸಮಸ್ಯೆಯ ಬಗ್ಗೆ ಕಾಂಗ್ರೆಸ್​ ನಾಯಕರು ಕೇಂದ್ರವನ್ನು ಪ್ರಶ್ನೆ ಕೇಳಲಾರಂಭಿಸಿದ್ದಾರೆ. (ಏಜೆನ್ಸೀಸ್​)

    ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

    ‘ಉತ್ತರ ಪ್ರದೇಶದಲ್ಲಿ 350 ಸೀಟು ಗೆದ್ದೇ ಗೆಲ್ಲುತ್ತೇವೆ’

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts