More

    ಇಳಕಲ್ಲದಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

    ಇಳಕಲ್ಲ: ವಿಧಾನಸಭೆ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಮಂಡಿಸಿ ಅನುಮೋದನೆ ಪಡೆದ ಸಿಎಂ ಬಿ.ಎಸ್. ಯಡಿಯೂರಪ್ಪ ಸರ್ಕಾರದ ಕ್ರಮವನ್ನು ಗುರುವಾರ ನಗರದ ಕಂಠಿ ವೃತ್ತದಲ್ಲಿ ಬಿಜೆಪಿ ರೈತ ಮೋರ್ಚಾ ಹಾಗೂ ಯುವ ಮೋರ್ಚಾ ಕಾರ್ಯಕರ್ತರು ಸ್ವಾಗತಿಸಿ ಗೋ ಮಾತೆಗೆ ಪೂಜೆ ಸಲ್ಲಿಸಿ ವಿಜಯೋತ್ಸವ ಆಚರಿಸಿದರು.

    ಬಿಜೆಪಿ ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಪಾಟೀಲ, ಇಳಕಲ್ಲ ನಗರ ಮಂಡಲ ಅಧ್ಯಕ್ಷ ಅರವಿಂದ ಮಂಗಳೂರ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಏಕಬೋಟಿ, ಯುವ ಮೋರ್ಚಾ ನಗರ ಮಂಡಲ ಅಧ್ಯಕ್ಷ ಆನಂದ ಪಾಟೀಲ, ಜಿಲ್ಲಾ ಮೋರ್ಚಾ ಉಪಾಧ್ಯಕ್ಷ ಮಹೇಶ ಪಾಟೀಲ, ನಗರ ಎಸ್‌ಸಿ ಮೋರ್ಚಾ ಅಧ್ಯಕ್ಷ ಪರಶುರಾಮ ಬಿಸಲದಿನ್ನಿ, ವೀರೇಶ ಮನ್ನಾಪುರ, ಸಂಘ ಪರಿವಾರದ ಹಿರಿಯರಾದ ನಾರಾಯಣಪ್ಪ ಚಿಲ್ಲಾಳ, ಪುರುಷೋತ್ತಮ ದರಕ, ಶಿವು ಮಾದಗುಂಡಿ, ಪ್ರದೀಪ ಅಮರಣ್ಣನವರ ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts