More

    ಅಕ್ರಮ ಮದ್ಯ ಮಾರಾಟಗಾರನ ಬಂಧನ

    ಬಾಳೆಹೊನ್ನೂರು: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮನೆ ಮೇಲೆ ದಾಳಿ ನಡೆಸಿದಾಗ ಪೊಲೀಸರನ್ನು ತಳ್ಳಿ ಪರಾರಿಯಾಗಿದ್ದ ಆರೋಪಿಯೇ ಮಹಿಳೆ ಮೂಲಕ ಪೊಲೀಸರ ವಿರುದ್ಧ ಸುಳ್ಳು ದೂರು ದಾಖಲಿಸಲು ಯತ್ನಿಸಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.

    ದೇವದಾನ ಗ್ರಾಮದ ಚಾಕಲುಮನೆ ಪ್ರಮೋದ್ ಬಂಧಿತ ಆರೋಪಿ. ಪ್ರಮೋದ್ ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಬಾಳೆಹೊನ್ನೂರು ಪೊಲೀಸರು ಪಿಎಸ್‌ಐ ರವೀಶ್ ನೇತತ್ವದಲ್ಲಿ ಮಂಗಳವಾರ ರಾತ್ರಿ ದಾಳಿ ನಡೆಸಿದರು. ದಾಳಿ ಮಾಡುತ್ತಿದ್ದಂತೆ ಪ್ರಮೋದ್ ಪೊಲೀಸರನ್ನು ತಳ್ಳಿ ಪರಾರಿಯಾಗಿದ್ದ. ಸುತ್ತಮುತ್ತ ಹುಡುಕಿದಾಗ ಸಿಗದಿದ್ದಾಗ ಪೊಲೀಸರು ವಾಪಸ್ ತೆರಳಿದ್ದರು. ಸ್ವಲ್ಪ ಸಮಯದ ಬಳಿಕ ಮನೆಗೆ ಬಂದ ಆರೋಪಿ ಸ್ಥಳೀಯ ಮಹಿಳೆಯೊಬ್ಬರನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಬಾಳೆಹೊನ್ನೂರು ಪೊಲೀಸರು ವಿನಾಕಾರಣ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸುಳ್ಳು ಆರೋಪ ಮಾಡಿ ಪೊಲೀಸರ ವಿರುದ್ಧವೇ ದೂರು ನೀಡಲು ಯತ್ನಿಸಿದ್ದ.
    ಬಾಳೆಹೊನ್ನೂರು ಪೊಲೀಸರು ಮಹಿಳೆಯನ್ನು ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿದಾಗ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಪ್ರಮೋದ್, ಪೊಲೀಸರ ವಿರುದ್ಧ ಸುಳ್ಳು ದೂರು ದಾಖಲು ಮಾಡುವಂತೆ ಪ್ರೇರೇಪಿಸಿದ್ದರಿಂದ ನಾನು ಆಸ್ಪತ್ರೆಗೆ ದಾಖಲಾಗಿ ಪೊಲೀಸರ ವಿರುದ್ಧ ದೂರು ನೀಡಲು ಸಿದ್ಧತೆ ಮಾಡಿಕೊಂಡಿದ್ದೆ ಎಂದು ತಪ್ಪೊಪ್ಪಿಕೊಂಡಿದ್ದಾರೆ. ನಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಮೋದ್‌ನನ್ನು ಬಂಧಿಸಿದರು. ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಆತನ ವಿರುದ್ಧ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts