More

    ಅಕ್ರಮ ಮದ್ಯ ವಶ

    ಕಾರವಾರ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಾಜಾಳಿ ತನಿಖಾ ಠಾಣೆಯಲ್ಲಿ ಸ್ಕಾರ್ಪಿಯೋ ವಾಹನದಲ್ಲಿ ಸಾಗಿಸುತ್ತಿದ್ದ 84,600 ರೂ. ಮೌಲ್ಯದ ಅಕ್ರಮ ಮದ್ಯ ವನ್ನು ಹಾಗೂ 8 ಲಕ್ಷ ರೂ. ಮೌಲ್ಯದ ವಾಹನವನ್ನು ಅಬಕಾರಿ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ.

    ಗೋವಾ ರಿವೋರಾದ ಎಡ್ಮಂಡ್ ವಿಲಿಯಂ ಪೆರೆರಾ ಎಂಬಾತನನ್ನು ಬಂಧಿಸಲಾಗಿದೆ.

    ಅಬಕಾರಿ ಇನ್ಸ್‌ಪೆಕ್ಟರ್ ದಯಾನಂದ ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ವಶಕ್ಕೊಪ್ಪಿಸಿದ್ದಾರೆ.

    ಯಲ್ಲಾಪುರದಲ್ಲಿ ಅಕ್ರಮ ಮದ್ಯ ಸಾಗಿಸುತ್ತಿದ್ದವ ಅಂದರ್

    ಯಲ್ಲಾಪುರ: ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯವನ್ನು ಯಲ್ಲಾಪುರ ಅಬಕಾರಿ ಅಧಿಕಾರಿಗಳು ಮುಂಡಗೋಡಿನ ಹುಬ್ಬಳ್ಳಿ ರಸ್ತೆಯಲ್ಲಿ ವಶಪಡಿಸಿಕೊಂಡಿದ್ದಾರೆ.

    ಮುಂಡಗೋಡ ಪಟ್ಟಣದಿಂದ 2 ಕಿ.ಮೀ ಅಂತರದಲ್ಲಿ ಹುಬ್ಬಳ್ಳಿ ರಸ್ತೆಯಲ್ಲಿ ವಾಹನ ತಪಾಸಣೆ ನಡೆಸುತ್ತಿರುವಾಗ ಪತ್ತೆಯಾಗಿದೆ.

    ಸವಾರ ಬಾಚಣಿಕಿ ಗ್ರಾಮದ ಫಕೀರಯ್ಯ ತಿಪ್ಪಯ್ಯ ಹಿರೇಮಠ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.

    ದ್ವಿಚಕ್ರ ವಾಹನ ಹಾಗೂ ಅದರಲ್ಲಿ ಸಾಗಿಸುತ್ತಿದ್ದ 21.330 ಲೀ ಮದ್ಯ ವಶಪಡಿಸಿಕೊಳ್ಳಲಾಗಿದೆ.

    ಅಬಕಾರಿ ಉಪ ಅಧೀಕ್ಷಕ ಶಂಕರಗೌಡ ಪಾಟೀಲ ನೇತೃತ್ವದಲ್ಲಿ ಅಬಕಾರಿ ಉಪನಿರೀಕ್ಷಕ ಮಂಜುನಾಥ ಜೋಗಳೇಕರ, ಸಿಬ್ಬಂದಿ ಧ್ರುವರಾಜ ಬ್ಯಾಹಟ್ಟಿ, ಸಿ.ಪಿ. ರಾಠೋಡ, ಮಹಾಂತೇಶ ಹೊಣ್ಣೂರ, ಪ್ರಸನ್ನ ನೇತ್ರಕರ ದಾಳಿಯಲ್ಲಿ ಪಾಲ್ಗೊಂಡಿದ್ದರು.

    ಅಕ್ರಮ ಮದ್ಯ ವಶ

    ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ

    ಮುಂಡಗೋಡ ತಾಲೂಕಿನ ಕುಸೂರ ಕ್ರಾಸ್ ಬಳಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

    ಉತ್ತರ ಪ್ರದೇಶ ಮೂಲದ ಆರ್ಯನ್ ಅಲಿಯಾಸ್ ಅಮರೀಶ್ ಕುಮಾರ್ ಹಾಗೂ ಭಟ್ಕಳ ಮೂಲದ ಮಹ್ಮದ ಅಲಿ ಬಂಧಿತ ಆರೋಪಿಗಳಾಗಿದ್ದಾರೆ.

    ಬಂಧಿತರಿಂದ 410ಗ್ರಾಂ ಗಾಂಜಾ, ಬೈಕ್ ವಶಪಡಿಸಿಕೊಳ್ಳಲಾಗಿದೆ.

    ಸಿಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ ಕ್ರೈಂ ಪಿಎಸ್‌ಐ ಎನ್.ಡಿ. ಜಕ್ಕಣ್ಣನವರ್, ಪಿಎಸ್‌ಐ ಯಲ್ಲಾಲಿಂಗ ಕುನ್ನೂರು, ಸಿಬ್ಬಂದಿಗಳಾದ ಅನ್ವರ್‌ಖಾನ್, ಕೋಟೇಶ ನಾಗರಳ್ಳಿ, ಅಣ್ಣಪ್ಪ ಬುಡಗೇರ, ಮಹಾಂತೇಶ ಮುಧೋಳ, ಸಂಜು ರಾಠೋಡ್ ಇತರರು ದಾಳಿಯಲ್ಲಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts