More

    ಅಕ್ರಮ ಮರಳು ಸಾಗಾಟ, 4 ವಾಹನ ವಶ

    ರಾಣೆಬೆನ್ನೂರ: ತಾಲೂಕಿನ ಗುಡಗೂರ-ಹೊನ್ನತ್ತಿ ರಸ್ತೆಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ನಾಲ್ಕು ಮಜಡಾ ವಾಹನಗಳನ್ನು ತಹಸೀಲ್ದಾರ್ ಶಂಕರ ಜಿ.ಎಸ್. ವಶಪಡಿಸಿಕೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

    ತಾಲೂಕಿನ ಮೇಡ್ಲೇರಿ ಗ್ರಾಮದ ಬಳಿಯ ತುಂಗಭದ್ರಾ ನದಿಪಾತ್ರದಿಂದ ಕೆಲವರು ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ತಹಸೀಲ್ದಾರ್ ಶಂಕರ ಜಿ.ಎಸ್., ಮರಳು ತುಂಬಿದ ನಾಲ್ಕು ಮಜಡಾ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

    ತಹಸೀಲ್ದಾರ್ ದಾಳಿ ನಡೆಸುತ್ತಿದ್ದಂತೆ ಚಾಲಕರು ವಾಹನ ಬಿಟ್ಟು ಓಡಿ ಹೋಗಿದ್ದಾರೆ. ನಂತರ ಅವುಗಳನ್ನು ಗ್ರಾಮೀಣ ಠಾಣೆ ಪೊಲೀಸರ ವಶಕ್ಕೆ ನೀಡಿ, ಪ್ರಕರಣ ದಾಖಲಿಸುವಂತೆ ತಹಸೀಲ್ದಾರ್ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಉಪ ತಹಸೀಲ್ದಾರ್ ಶ್ಯಾಮ ಗೊರವರ, ಕಂದಾಯ ನಿರೀಕ್ಷಕ ವಾಗೀಶ ಮಳಿಮಠ, ಗ್ರಾಮ ಲೆಕ್ಕಾಧಿಕಾರಿ ಬಸವಂತಪ್ಪ ಮತ್ತಿತರರು ಕಾರ್ಯಾಚರಣೆಯಲ್ಲಿದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts