More

    ಅನೈತಿಕ ಸಂಬಂಧ ಮುಂದುವರಿಸಲು ಒಪ್ಪದ ಚಿಕ್ಕಮ್ಮನ ಮೇಲೆ ಮಗನ ಅಟ್ಟಹಾಸ

    ಚಿತ್ರದುರ್ಗ: ಅನೈತಿಕ ಸಂಬಂಧ ಮುಂದುವರಿಸಲು ನಿರಾಕರಿಸಿದ್ದಕ್ಕೆ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನ ತಿಪ್ಪಾರೆಡ್ಡಿಹಳ್ಳಿಯಲ್ಲಿ ನಡೆದಿದೆ.

    ಮೀನಾಕ್ಷಮ್ಮ(48) ಹತ್ಯೆಯಾದ ಮಹಿಳೆ. ಶ್ರೀನಿವಾಸ್ ಎಂಬಾತನ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಮೀನಾಕ್ಷಮ್ಮ, ಶ್ರೀನಿವಾಸ್​ಗೆ ಚಿಕ್ಕಮ್ಮ ಆಗಬೇಕು. ಹಲವು ವರ್ಷಗಳಿಂದ ಇಬ್ಬರ ನಡುವೆ ಅಕ್ರಮ ಸಂಬಂಧ ಇತ್ತು. ಆದರೆ, ಕಳೆದ 20 ದಿನಗಳಿಂದ ಶ್ರೀನಿವಾಸ್​ನನ್ನು ಮೀನಾಕ್ಷಮ್ಮ ದೂರವಿಟ್ಟಿದ್ದಳು. ಅಲ್ಲದೆ, ಅಕ್ರಮ ಸಂಬಂಧ ಮುಂದುವರಿಸಲು ಒಪ್ಪಿರಲಿಲ್ಲ. ಇದರಿಂದ ಕುಪಿತಗೊಂಡ ಶ್ರೀನಿವಾಸ್​ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ.

    ಇದನ್ನೂ ಓದಿ: ಡ್ರಗ್ಸ್​ ಜಾಲದಲ್ಲಿ ಸ್ಯಾಂಡಲ್​ವುಡ್?​: ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ರವಿ ಬೆಳಗೆರೆ!

    ಘಟನಾ ಸ್ಥಳಕ್ಕೆ ಪರಶುರಾಂಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಸಿಕೊಂಡಿದ್ದು, ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ಪ್ಲಾಸ್ಮಾ ದಾನಿಗಳ ಕುಟುಂಬಗಳಿಗೆ ವಿಶೇಷ ಆರೋಗ್ಯ ಪ್ರೋತ್ಸಾಹ ಧನ ಘೋಷಿಸಿದ ಗೋವಾ ಸರ್ಕಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts