ಜಮ್ಮು-ಕಾಶ್ಮೀರ ಚುನಾವಣೆ: ಸೋಲನ್ನು ಒಪ್ಪಿ ಜನರ ತೀರ್ಪಿಗೆ ತಲೆಬಾಗುತ್ತೇನೆಂದ ಮೆಹಬೂಬ ಮುಫ್ತಿ​ ಪುತ್ರಿ | Iltija Mufti

Iltija Mufti

ನವದೆಹಲಿ: ಆರ್ಟಿಕಲ್​ 370 ರದ್ದಾದ ಬಳಿಕ ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಭಾರಿ ಮುನ್ನಡೆ ಕಾಯ್ದುಕೊಂಡಿದ್ದು, ಸರ್ಕಾರ ರಚನೆಯತ್ತ ದಾಪುಗಾಲು ಇಡುತ್ತಿದೆ. ಇತ್ತ ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ​ ಅವರ ಪುತ್ರಿ ಹಾಗೂ ಪೀಪಲ್ಸ್​ ಡೆಮಾಕ್ರೆಟಿಕ್ ಪಕ್ಷದ (ಪಿಡಿಪಿ) ಅಭ್ಯರ್ಥಿ ಇಲ್ತಿಜಾ ಮುಫ್ತಿ​ ( Iltija Mufti ) ತಮ್ಮ ಸೋಲನ್ನು ಒಪ್ಪಿಕೊಂಡಿದ್ದಾರೆ.

ಶ್ರೀಗುಫ್ವಾರಾ-ಬಿಜ್ಬೆಹರಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಇಲ್ತಿಜಾ ಮುಫ್ತಿ ತೀವ್ರ ಹಿನ್ನಡೆ ಅನುಭವಿಸಿದ್ದಾರೆ. ಈಗಾಗಲೇ ಅರ್ಧದಷ್ಟು ಮತಎಣಿಕೆ ಕಾರ್ಯ ನಡೆದಿದ್ದು, ಭಾರಿ ಹಿನ್ನಡೆ ಅನುಭವಿಸಿರುವುದರಿಂದ ಮುಫ್ತಿ ಅವರು ತಮ್ಮ ಸೋಲನ್ನು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: 6500 ಅಡಿ ಎತ್ತರದ ಹಿಮಾಲಯ ಪರ್ವತ ಶ್ರೇಣಿಯಲ್ಲಿ ಕಾಣಿಸಿಕೊಂಡ ನವಿಲು! ಕಾದಿದೆಯಾ ಅಪಾಯ? ತಜ್ಞರು ಹೇಳಿದ್ದಿಷ್ಟು… Peacock

ನಾನು ಜನರ ತೀರ್ಪನ್ನು ಒಪ್ಪಿಕೊಳ್ಳುತ್ತೇನೆ. ಬಿಜ್‌ಬೆಹರಾದಲ್ಲಿ ನಾನು ಎಲ್ಲರಿಂದ ಪಡೆದ ಪ್ರೀತಿ ಮತ್ತು ಮಮತೆ ಯಾವಾಗಲೂ ನನ್ನೊಂದಿಗೆ ಇರುತ್ತದೆ. ಈ ಅಭಿಯಾನದ ಉದ್ದಕ್ಕೂ ಶ್ರಮಿಸಿದ ನನ್ನ ಪಿಡಿಪಿ ಕಾರ್ಯಕರ್ತರಿಗೆ ಕೃತಜ್ಞತೆಗಳು ಎಂದು ಇಲ್ತಿಜಾ ಮುಫ್ತಿ​ ಅವರು ತಮ್ಮ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಮುಫ್ತಿಗಿಂತ ನ್ಯಾಷನಲ್ ಕಾನ್ಫರೆನ್ಸ್‌ನ ಬಶೀರ್ ಅಹ್ಮದ್ ಶಾ ವೀರಿ ಅವರು ಶ್ರೀಗುಫ್ವಾರಾ-ಬಿಜ್ಬೆಹರಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ಸೋಫಿ ಯೂಸಿಫ್ ಮೂರನೇ ಸ್ಥಾನದಲ್ಲಿದ್ದಾರೆ.

ವಿಧಾನಸಭೆಯಲ್ಲಿ 90 ಸದಸ್ಯಬಲ ಹೊಂದಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18 ರಿಂದ ಅಕ್ಟೋಬರ್ 1 ರವರೆಗೆ ಮೂರು ಹಂತಗಳಲ್ಲಿ ಮತದಾನ ನಡೆದವು. ಇದು 10 ವರ್ಷಗಳಲ್ಲಿ ನಡೆದ ಮೊದಲ ಚುನಾವಣೆಯಾಗಿದೆ. ಸದ್ಯ ಕಾಂಗ್ರೆಸ್​ 50ರಲ್ಲಿ ಮತ್ತು ಬಿಜೆಪಿ 20 ಸ್ಥಾನದಲ್ಲಿ ಮುನ್ನಡೆ ಸಾಧಿಸಿವೆ. ಸ್ಪಷ್ಟ ಬಹುಮತ ದಾಟಿ ಸರ್ಕಾರ ರಚನೆಯತ್ತ ಕಾಂಗ್ರೆಸ್​ ದಾಪುಗಾಲು ಇಡುತ್ತಿದೆ. (ಏಜೆನ್ಸೀಸ್​)

ಸ್ನೇಹಿತರ ಬಳಿ ಬಾಜಿ ಕಟ್ಟಿ ಜೀವಂತ ಮೀನು ನುಂಗಿದ ಯುವಕ! ನಂತ್ರ ಏನಾಯ್ತು ಗೊತ್ತಾ? ಇಲ್ಲಿದೆ ಶಾಕಿಂಗ್​ ಸಂಗತಿ | Live Fish

ಜಾತಿ ಗಣತಿ ವರದಿ ರಾಜಕೀಯ ದಾಳವಾಗಿ ಬಳಕೆಗೆ ಸಿಎಂ ಆತುರ: ವಿಜಯೇಂದ್ರ ಸಂಶಯ | B Y Vijayendra

Share This Article

ನಿಮ್ಮ ಸಂಪತ್ತು ವೃದ್ಧಿಯಾಗಬೇಕಾ? ಅಕ್ಷಯ ತೃತೀಯದಂದು ಹೀಗೆ ಮಾಡಬೇಕು… Akshaya Tritiya

Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಹಿಂದೂಗಳು ಬಹಳ ಪವಿತ್ರವೆಂದು ಪರಿಗಣಿಸುತ್ತಾರೆ. ಈ ಅಕ್ಷಯ ತೃತೀಯ…

ರಾತ್ರಿ ಏನೂ ತಿನ್ನದೆ ಮಲಗುತ್ತಿದ್ದೀರಾ? ಆದರೆ ನೀವು ಖಂಡಿತವಾಗಿಯೂ ಈ ವಿಷಯಗಳನ್ನು ತಿಳಿದುಕೊಳ್ಳಬೇಕು…Health Tips

Health Tips: ಇತ್ತೀಚೆಗೆ, ಅನೇಕ ಜನರು ಸಮಯದ ಅಭಾವ, ಹಸಿವಿನ ಅಭಾವ, ಉದ್ವೇಗ ಸೇರಿದಂತೆ ವಿವಿಧ…

ದಿನಾ ಒಂದು ಮೊಟ್ಟೆ ತಿನ್ನಿರಿ; ದೇಹದ ಸಕಾರಾತ್ಮಕ ಬದಲಾಣೆಗಳನ್ನು ಒಮ್ಮೆ ನೋಡಿ!: | Positive Changes

Positive Changes : ಮೊಟ್ಟೆಗಳನ್ನು ಪೋಷಕಾಂಶಗಳ ಶಕ್ತಿ ಕೇಂದ್ರವೆಂದು ಪರಿಗಣಿಸಲಾಗುತ್ತದೆ. ಇದು ಪ್ರೋಟೀನ್, ಜೀವಸತ್ವಗಳು ಮತ್ತು…