ಐಮಂಗಲ: ಕರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಅತಿ ಹೆಚ್ಚು ಜಾಗ್ರತೆ ವಹಿಸಬೇಕು ಎಂದು ಪೊಲೀಸ್ ಠಾಣೆಯ ಪಿಎಸ್ಐ ಎ.ಮಂಜುನಾಥ್ ಹೇಳಿದರು.
ಗ್ರಾಮದಲ್ಲಿ ಪೊಲೀಸ್ ಠಾಣೆ ಬುಧುವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾದಲ್ಲಿ ಮಾತನಾಡಿ, ದೇಶಾದ್ಯಂತ ಸೋಂಕಿತ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ನಿರ್ಮೂಲನೆ ಮಾಡಲು ಎಲ್ಲರೂ ಸಹಕರಿಸಬೇಕು ಎಂದರು.
ಸಿಬ್ಬಂದಿ ರಾಜಣ್ಣ, ವಿಷ್ಣು, ಮುದ್ದಹನುಮೇಗೌಡ, ರಮೇಶ್, ರವಿ, ನಾಗರಾಜು ಇತರರಿದ್ದರು.