More

    ಜೈಲಿನಲ್ಲಿ ಚಂದ್ರಬಾಬು ನಾಯ್ಡು ಅವರ ಜೀವಕ್ಕೆ ಆಪತ್ತು ಎದುರಾಗಿದೆ: ನಾರಾ ಲೋಕೇಶ್ ಆರೋಪ

    ಅಮರಾವತಿ: ಕೌಶಲ್ಯಾಭಿವೃದ್ದಿ ನಿಗಮದಲ್ಲಿನ ಬಹುಕೋಟಿ ಅಕ್ರಮ ಸೇರಿದಂತೆ ಹಲವು ಭ್ರಷ್ಟಾಚಾರ ಪ್ರಕರಣಗಳಲ್ಲಿ ಜೈಲು ಸೇರಿರುವ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ಜೀವಕ್ಕೆ ಆಪತ್ತಿದೆ ಎಂದು ಅವರ ಪುತ್ರ ನಾರಾ ಲೋಕೇಶ್​ ಆರೋಪಿಸಿದ್ದಾರೆ.

    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು, ಚಂದ್ರಬಾಬು ನಾಯ್ಡು ಅವರ ಆರೋಗ್ಯದ ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಜೈಲಿನಲ್ಲಿ ಚಂದ್ರಬಾಬು ನಾಯ್ಡು ಅವರ ಜೀವಕ್ಕೆ ಬೆದರಿಕೆ ಇದೇ ಎಂದಿದ್ದಾರೆ.

    ಇದನ್ನೂ ಓದಿ: ಶವದ ಪಕ್ಕ ಕುಳಿತು ರೋದಿಸಿದ ಕೋತಿ; ಮನಕಲಕುವ ದೃಶ್ಯ ವೈರಲ್

    ವಿಜಯವಾಡದಲ್ಲಿರುವ ರಾಜಮಹೇಮದ್ರವರ್ಮ ಕೇಂದ್ರ ಕಾರಾಗೃಹದಲ್ಲಿ ಚಂದ್ರಬಾಬು ನಾಯ್ಡು ಅವರು ಬಹಳ ಭೀಕರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ತೀವ್ರ ಸೋಂಕಿನಿಂದ ಬಳಲುತ್ತಿದ್ದಾರೆ. ಅವರಿಗೆ ಯಾವುದೇ ವೈದ್ಯಕೀಯ ನೆರವನ್ನು ನೀಡಲಾಗುತ್ತಿಲ್ಲ. ಆಂಧ್ರಪ್ರದೇಶ ಸರ್ಕಾರವು ಅವರಿಗೆ ಸ್ಟೆರಾಯ್ಡ್​ಗಳನ್ನು ನೀಡಿ ಆರೋಗ್ಯ ಹದಗೆಡುವಂತೆ ಮಾಡಲು ಯತ್ನಿಸುತ್ತಿದೆ.

    ಅವರು ಬಂಧನವಾದ ದಿನದಿಂದಲ್ಲೂ ಇಲ್ಲಿಯವರೆಗೂ ಅವರ ಆರೋಗ್ಯ ಕ್ಷೀಣಿಸುತ್ತಿದೆ. ಈ ವಿಚಾರವನ್ನು ನಾವು ಜೈಲಿನ ಅಧಿಕಾರಿಗಳು ಹಾಗೂ ವೈದ್ಯರ ಬಳಿ ವಿಚಾರಿಸಿದಾಗ ಅವರು ಯಾವ ಉತ್ತರವನ್ನು ನೀಡದೆ ತೆರಳಿದ್ದಾರೆ. ಒಂದು ವೇಳೆ ಚಂದ್ರಬಾಬು ನಾಯ್ಡು ಅವರಿಗೆ ಏನಾದರೂ ಹೆಚ್ಚು ಕಡಿಮೆ ಆದಲ್ಲಿ ಅದಕ್ಕೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್​ಮೋಹನ್​ ರೆಡ್ಡಿ ಅವರೇ ನೇರ ಹೊಣೆ ಎಂದು ಟಿಡಿಪಿ ಪ್ರದಾನ ಕಾರ್ಯದರ್ಶಿ ನಾರಾ ಲೋಕೇಶ್​ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts