ಬೆಂಗಳೂರು : ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಕಾನೂನು ತಂಡದೊಂದಿಗೆ ಈ ವಾರಾಂತ್ಯದಲ್ಲಿ ಮಹತ್ವದ ಸಭೆ ನಡೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಗೃಹ ಸಚಿವರು, ಸುಪ್ರೀಂ ಕೋರ್ಟ್ನಲ್ಲಿ ತಮಿಳುನಾಡಿನ ದಾವೆ ಮಾತ್ರ ಇರುವುದರಿಂದ ಯೋಜನೆ ಅನುಷ್ಠಾನಕ್ಕಾಗಿ ಯಾವ್ಯಾವ ತೀರುವಳಿ ಪಡೆಯಬೇಕು ಎಂಬ ಬಗ್ಗೆ ಚರ್ಚಿಸಿ ಮುಂದಿನ ನಿರ್ಧಾರಕ್ಕೆ ಬರಲಾಗುವುದು ಎಂದರು.
ಇದನ್ನೂ ಓದಿ: ಸಿಎಂ ಮಮತಾ ಬ್ಯಾನರ್ಜಿಗೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್
ವಿಧಾನ ಮಂಡಲದ ಮುಂಗಾರು ಅಧಿವೇಶನದ ದಿನಾಂಕ ಗೊತ್ತುಪಡಿಸುವ ಬಗ್ಗೆ ಯಾವುದೇ ಚಿಂತನೆ ನಡೆದಿಲ್ಲ. ಈ ಬಗ್ಗೆ ಸಿಎಂ ಬಿಎಸ್ವೈ ಜತೆಗೆ ಚರ್ಚಿಸಲಾಗುವುದು ಎಂದರು.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಎರಡು ವರ್ಷಗಳ ನಂತರ ಪುನರ್ರಚನೆಯಾಗುತ್ತಿದ್ದು, ಯಾರ್ಯಾರು ಇರ್ತಾರೆ ಎಂದು ಹೇಳುವಷ್ಟು ದೊಡ್ಡವ ನಾನಲ್ಲ. ಆ ಬಗ್ಗೆ ಮಾಹಿತಿ ಇಲ್ಲ. ರಾಜ್ಯಕ್ಕೆ ಒಳ್ಳೆಯ ಪ್ರಾತಿನಿಧ್ಯ ಸಿಗುವ ವಿಶ್ವಾಸವಿದೆ ಎಂದು ಬೊಮ್ಮಾಯಿ ಹೇಳಿದರು.
ಕರೊನಾ ಮಾರ್ಗಸೂಚಿ ಚಾಚೂತಪ್ಪದೆ ಪಾಲನೆ; VRL ಬಸ್ಗಳು ಸಂಪೂರ್ಣ ಸುರಕ್ಷಿತ