More

    ಕಳಪೆ ಕಾಮಗಾರಿ ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ

    ನಾಪೋಕ್ಲು: ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಡಿ ಇಗ್ಗುತಪ್ಪ ದೇವಾಲಯದ ರಸ್ತೆ ಕಾಮಗಾರಿಯನ್ನು ಗುಣಮಟ್ಟದಿಂದ ನಿಗದಿತ ಸಮಯದಲ್ಲಿ ಪೂರೈಸಲಾಗುವುದು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.

    ಎನ್‌ಡಿಆರ್‌ಎಫ್ ವತಿಯಿಂದ ಒದಗಿಸಲಾದ 12 ಲಕ್ಷ ರೂ. ಅನುದಾನದಲ್ಲಿ ಪಾಡಿ ಇಗ್ಗುತಪ್ಪ ದೇವಾಲಯದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಗ್ರಾಮಸ್ಥರ, ಸ್ಥಳೀಯ ನಾಗರಿಕರ ಬೇಡಿಕೆಯಂತೆ ರಸ್ತೆ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು. ಸಕಾಲದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಗುಣಮಟ್ಟದ ಕೆಲಸ ಹಾಗೂ ನಿಗದಿತ ಸಮಯದಲ್ಲಿ ಮುಗಿಸಬೇಕು. ಕಳಪೆ ಕಾಮಗಾರಿ ಇದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಇದಕ್ಕೂ ಮುನ್ನ ನರಿಯಂದಡ ಅರಪಟ್ಟು, ಪೊದವಾಡದಲ್ಲಿರುವ ಸ್ವಚ್ಛ ಸಂಕೀರ್ಣ ಘಟಕ ನಿರ್ಮಾಣಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು. ಕಕ್ಕಬ್ಬೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪೊಂಗೇರ ಶಿಲ್ಪಾ, ಸದಸ್ಯರಾದ ಕಲಿಯಂಡ ಸಂಪನ್ ಅಯ್ಯಪ್ಪ, ಹರೀಶ್ ಮೋಣ್ಣಪ್ಪ , ಲೀಲಾವತಿ ಕೆ.ಆರ್, ಶೌಕತ್ ಅಲಿ, ಬಷೀರ್, ರಜು ಬಡತನ ದೀನಾ ಪೂವಯ್ಯ, ಮಾಜಿ ಅಧ್ಯಕ್ಷೆ ಕತರ್ಂಡ ಶೈಲಾ ಕುಟ್ಟಪ್ಪ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಸೂರಜ್ ಹೊಸೂರು, ಪ್ರಮುಖರಾದ ಬಿದ್ದಾ ತಂಡ ತಮ್ಮಯ್ಯ, ಕಕ್ಕಬ್ಬೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವೈ.ಕೋಲ್ ಉಸ್ಮಾನ್, ಉದಿಯಂಡ ಸುಭಾಷ್, ಕುಡಿಯರ ಮುತ್ತಪ್ಪ, ಅರ್ಚಕ ಶ್ರೀಕಾಂತ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts