ಕಲಬುರಗಿ: ನೇಣು ಬಿಗಿದುಕೊಂಡು ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ಡಿಎಆರ್ ಹೆಡ್ ಕ್ವಾರ್ಟರ್ಸ್ನಲ್ಲಿ ನಡೆದಿದೆ. ಜಿಲ್ಲೆಯ ಚಿಂಚೋಳಿ ತಾಲೂಕಿನ ಚಿಮ್ಮನಚೋಡ್ ಗ್ರಾಮದ ನಿವಾಸಿ ಪಾಂಡುರಂಗ (47) ಆತ್ಮಹತ್ಯೆಗೆ ಶರಣಾಗಿರುವ ಹೆಡ್ ಕಾನ್ಸ್ಟೇಬಲ್.
ಪಾಂಡುರಂಗ ನಿನ್ನೆ ರಾತ್ರಿ 10 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳಿದ್ದರು. ಹೆಚ್ಚಿನ ಶೆಖೆಯ ವಾತಾವರಣ ಇದ್ದುದರಿಂದ ಮಕ್ಕಳಿಬ್ಬರು ಮನೆಯ ಮೇಲ್ಛಾವಣಿಯಲ್ಲಿ ಮಲಗಿದ್ದರು. ಗಂಡ-ಹೆಂಡತಿ ಮಾತ್ರ ಮನೆಯ ಬೆಡ್ರೂಮ್ನಲ್ಲಿ ಮಲಗಿದ್ದರು. ಆದರೆ ಪಾಂಡುರಂಗ ನುಸುಕಿನ ಜಾವ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಾಂಡುರಂಗ ಅತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನೆಂಬುದು ಬಹಿರಂಗವಾಗಿಲ್ಲ. ಈ ಬಗ್ಗೆ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.