ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ಕನ್ನಡ ಚಿತ್ರ ನಿರ್ಮಾಪಕ ಶಂಕರೇಗೌಡ ಅವರನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ಡ್ರಗ್ಸ್ ಮಾಫಿಯಾ ಪ್ರಕರಣದಕ್ಕೆ ಸಂಬಂಧಿಸಿದ್ದಂತೆ ಶಂಕರೇಗೌಡ ವಿರುದ್ಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಕೆಲವು ದಿನಗಳ ಹಿಂದೆ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದ ಪೊಲೀಸರು, ಹಲವಾರು ಮಾಹಿತಿ ಹಾಗೂ ದಾಖಲೆಗಳನ್ನು ಕಲೆ ಹಾಕಿದ್ದರು. ಅಲ್ಲದೆ ಶಂಕರೇಗೌಡ ಅವರನ್ನು ಕೂಡ ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಿಟ್ಟಿದ್ದರು.
ಈ ಮಧ್ಯೆ ಮತ್ತಷ್ಟು ಮಾಹಿತಿ ಹಾಗೂ ದಾಖಲೆಗಳನ್ನು ಕಲೆ ಹಾಕಿರುವ ಪೊಲೀಸರು, ಇದುವರೆಗಿನ ವಿಚಾರಣೆ ಹಾಗೂ ಲಭ್ಯ ದಾಖಲೆಗಳ ಆಧಾರದ ಮೇಲೆ ಶಂಕರೇಗೌಡ ಅವರನ್ನು ಬಂಧಿಸಿದ್ದಾರೆ. ತನಿಖೆ ಮುಂದುವರಿದಿದ್ದು, ಮುಂದಿನ ಬೆಳವಣಿಗೆಗಳ ಕುರಿತ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.
ಸ್ಯಾಂಡಲ್ವುಡ್ನಲ್ಲಿ ಮತ್ತೆ ಡ್ರಗ್ಸ್ ಮಾಫಿಯಾ ಸದ್ದು; ನಿರ್ಮಾಪಕರೊಬ್ಬರ ಕಚೇರಿ ಮೇಲೆ ಪೊಲೀಸರ ದಾಳಿ
ಕಳ್ಳನ ಲವರ್ಗೂ ಚಿನ್ನದ ವ್ಯಾಪಾರಿಯ ಲವರ್ಗೂ ಇತ್ತು ಪರಿಚಯ; ಆಕೆ ಕೊಟ್ಟ ಮಾಹಿತಿ ಮೇರೆಗೆ ಚಿನ್ನ ದೋಚಿದ್ದ ಮೂವರ ಬಂಧನ