ನದಿಯಲ್ಲಿ ಮುಳುಗಿ ಇಬ್ಬರು ಸಾವು

blank

ಸವದತ್ತಿ: ತಾಲೂಕಿನ ಒಡಕಹೊಳಿ ಗ್ರಾಮದ ತಟದ ಕುಮಾರೇಶ್ವರ ಮಠದ ಬಳಿಯ ಮಲಪ್ರಭಾ ನದಿಯಲ್ಲಿ ಬುಧವಾರ ಸಂಕ್ರಾಂತಿ ಹಬ್ಬದ ದಿನದಂದು ಈಜಲು ಹೋಗಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ಕರೀಕಟ್ಟಿ ಗ್ರಾಮದ ಶಿವಪುತ್ರಪ್ಪ ಉಪ್ಪಾರ (21) ಹಾಗೂ ಮರೇವಾಡ ಗ್ರಾಮದ ರಾಜೇಸಾಬ್ ಮಕ್ತುಮಸಾಬ ಕರೀಕಟ್ಟಿ (36) ಮೃತ ವ್ಯಕ್ತಿಗಳು.

ಹಬ್ಬವನ್ನು ಸಂಭ್ರಮಿಸಲು ಕುಟುಂಬಸ್ಥರು, ಗೆಳೆಯರೊಂದಿಗೆ ಒಡಕಹೊಳಿ ಗ್ರಾಮದ ಮಲಪ್ರಭಾ ನದಿಗೆ ತೆರಳಿದ್ದರು. ನದಿಯಲ್ಲಿ ಸ್ನಾನ ಮಾಡುವ ವೇಳೆ ನೀರಿನ ಆಳ ತಿಳಿಯದೇ ಮುಳುಗಿ ಮೃತಪಟ್ಟಿದ್ದಾರೆ. ಅಗ್ನಿ ಶಾಮಕದಳ ಅಧಿಕಾರಿ ಎಂ.ಕೆ.ಕಲಾದಗಿ ಹಾಗೂ ಸಿಬ್ಬಂದಿ ಎರಡೂವರೆ ಗಂಟೆಗಳ ಕಾಲ ನದಿಯಲ್ಲಿ ಶೋಧ ಕಾರ್ಯ ನಡೆಸಿ ಇಬ್ಬರ ಶವಗಳನ್ನೂ ಹೊರ ತೆಗೆದಿದ್ದಾರೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…