More

    ಅನಾಥ ಮಕ್ಕಳ ಭವನ ಕಾಫಿಲ ಉದ್ಘಾಟನೆ

    ನಾಪೋಕ್ಲು: ಕೊಟ್ಟಮುಡಿ ಮರ್ಕಜುಲ್ ಹಿದಾಯದ ಅಧೀನದಲ್ಲಿ ಆರ್‌ಸಿಎಫ್‌ಐ ಅನುದಾನದಡಿ ನಿರ್ಮಿಸಿದ ಕಾಫಿಲ ಸಂಸ್ಥೆಯನ್ನು ಮರ್ಕಜ್ ನಾಲೆಜ್ಡ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮರ್ಕಜುಲ್ ಹಿದಾಯ ಕೊಡಗು ಸಂಸ್ಥೆಯ ಅಧ್ಯಕ್ಷ ಡಾ.ಮೊಹಮ್ಮದ್ ಅಬ್ದುಲ್ ಹಕೀಮ್ ಅಝ್ಹರಿ ಇತ್ತೀಚೆಗೆ ಉದ್ಘಾಟಿಸಿದರು.

    ನಂತರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಅನಾಥ ಮಕ್ಕಳಿಗೆ ಅನ್ನ ಮತ್ತು ವಸತಿ ಮಾತ್ರ ನೀಡಿದರೆ ಸಾಲದು, ಅವರಿಗೆ ಉತ್ತಮವಾದ ಬದುಕನ್ನು ಕಟ್ಟಿಕೊಳ್ಳಲು ಬೇಕಾದ ಶಿಕ್ಷಣ ಹಾಗೂ ನಡತೆಯನ್ನು ಕಲಿಸಬೇಕಾದ ಜವಾಬ್ದಾರಿ ಸಮಾಜದ ಮೇಲಿದೆ. ಆ ಕೆಲಸವನ್ನು ಮರ್ಕಝ್ ಸಂಸ್ಥೆ ಈ ಕಟ್ಟಡದ ಮೂಲಕ ಮಾಡಲಿದೆ. ಅದಕ್ಕೆ ದಾನಿಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು.

    ಮರ್ಕಝ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಸಖಾಫಿ, ಎಸ್‌ವೈಎಸ್ ರಾಜ್ಯ ನಾಯಕ ಸೈಯದ್ ಇಲ್ಯಾಸ್ ತಙಳ್, ಸಂಸ್ಥೆಯ ಉಪಾಧ್ಯಕ್ಷರಾದ ಅಹಮದ್ ಹಾಜಿ, ಮೊಹಿದ್ದೀನ್ ಕುಟ್ಟಿ ಹಾಜಿ, ಕಾರ್ಯದರ್ಶಿ ಯೂಸುಫ್ ಹಾಜಿ, ಕೋಶಾಧಿಕಾರಿ ಅಬ್ದುಲ್ಲಾ, ನಿರ್ದೇಶಕ ಮಹಮ್ಮದ್ ಹಾಜಿ ಕುಂಜಿಲ, ಕೊಡಗು ಜಿಲ್ಲಾ ಮುಸ್ಲಿಂ ಜಮಾಅತ್ ಅಧ್ಯಕ್ಷ ಲತೀಫ್ ಸುಂಟಿಕೊಪ್ಪ, ನಿರ್ದೇಶಕ ಕೊಹಿನೂರ್ ಅಬ್ದುಲ್ ರಹಿಮಾನ್ ಹಾಜಿ, ಹೊದ್ದೂರು ಗ್ರಾಪಂ ಸದಸ್ಯ ಹಮೀದ್, ಕೊಡಗು ಜಮಯತುಲ್ ಉಲೇಮಾ ಕೋಶಾಧಿಕಾರಿ ಹುಸೈನ್ ಸಖಾಫಿ , ಕೊಟ್ಟಮುಡಿ ಜಮಾತ್ ಅಧ್ಯಕ್ಷ ಉಸ್ಮಾನ್ ಹಾಜಿ, ಅಜಾದ್ ನಗರ ಜಮಾತ್ ಅಧ್ಯಕ್ಷ ಅಬೂಬಕ್ಕರ್, ಎಸ್‌ವೈಎಸ್ ಜಿಲ್ಲಾಧ್ಯಕ್ಷ ಹಮೀದ್ ಮುಸ್ಲಿಯಾರ್, ಎಮ್ಮೆಮಾಡು ಜಮಾತ್ ಅಧ್ಯಕ್ಷ ಅಬೂಬಕ್ಕರ್ ಸಖಾಫಿ, ಎಸ್‌ಎಸ್‌ಎಫ್ ಜಿಲ್ಲಾಧ್ಯಕ್ಷ ಜುಬೇರ್ ಸಖಾಫಿ, ಕಾರ್ಯದರ್ಶಿ ಜುನೈದ್, ಅಬ್ದುಲ್ಲ ಸಖಾಫಿ , ಹೊದ್ದೂರ್ ಗ್ರಾಮ ಪಂಚಾಯತ್ ಸದಸ್ಯ ಮೋಯ್ದು, ಉಪನ್ಯಾಸಕ ನೌಶಾದ್, ಮೊಯಿದಿನ್ ಬಾಳುಗೊಡ್, ಮೋಯಿದು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts