ತುರ್ತು ಸಂದರ್ಭಗಳಲ್ಲಿ ಅನನ್ಯ ಸೇವೆ…

Red Cross

ಅಪರ ಜಿಲ್ಲಾಧಿಕಾರಿ ಅಬೀದ ಗದ್ಯಾಳ ಶ್ಲಾಘನೆ

ವಿಶ್ವ ರೆಡ್​ಕ್ರಾಸ್​ ದಿನ ಉದ್ಘಾಟನೆ

ವಿಜಯವಾಣಿ ಸುದ್ದಿಜಾಲ ಉಡುಪಿ
ರಕ್ತದಾನ, ಪ್ರಥಮ ಚಿಕಿತ್ಸೆಯ ಜತೆಗೆ ಪ್ರಕೃತಿ ವಿಕೋಪ, ಪ್ರವಾಹದಂತಹ ತುರ್ತು ಸಂದರ್ಭಗಳಲ್ಲಿ ರೆಡ್​ಕ್ರಾಸ್​ ಸಂಸ್ಥೆಯು ಅನನ್ಯ ಸೇವೆ ಸಲ್ಲಿಸುತ್ತಿದೆ. ಸಂಕಷ್ಟಗಳಿಗೆ ಸ್ಪಂದಿಸುವುದೇ ರೆಡ್​ಕ್ರಾಸ್​ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಬೀದ ಗದ್ಯಾಳ ಶ್ಲಾಘಿಸಿದರು.

blank

ಉಡುಪಿ ಬ್ರಹ್ಮಗಿರಿಯಲ್ಲಿರುವ ರೆಡ್​ ಕ್ರಾಸ್​ ಭವನದ ಜೀನ್​ ಹೆನ್ರಿ ಡ್ಯುನಾಂಟ್​ ಸಭಾಂಗಣದಲ್ಲಿ ಜಿಲ್ಲಾ ಭಾರತೀಯ ರೆಡ್​ಕ್ರಾಸ್​ ಸೊಸೈಟಿ ವತಿಯಿಂದ ಮೇ 17ರಂದು ಬೆಳಗ್ಗೆ ಆಯೋಜಿಸಿದ್ದ ವಿಶ್ವ ರೆಡ್​ಕ್ರಾಸ್​ ದಿನ ಉದ್ಘಾಟಿಸಿ, ಫಲಾನುಭವಿಗಳಿಗೆ ವಿವಿಧ ಸಾಧನ-ಸಲಕರಣೆ ವಿತರಿಸಿ ಮಾತನಾಡಿದರು.

ಮಾನವೀಯ ಸೇವೆ

ಅಧ್ಯಕ್ಷತೆ ವಹಿಸಿದ್ದ ರಾಜ್ಯ ರೆಡ್​ ಕ್ರಾಸ್​ ಸಂಸ್ಥೆಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಮಾತನಾಡಿ, ಜಗತ್ತಿನಲ್ಲಿ ಮಾನವೀಯ ಸೇವೆ ಸಲ್ಲಿಸಿದ ಅತಿದೊಡ್ಡ ಸಂಸ್ಥೆ ಎಂಬ ಹೆಗ್ಗಳಿಕೆ ರೆಡ್​ಕ್ರಾಸ್​ ಸಂಸ್ಥೆಗಿದೆ. ಸಮಾಜಕ್ಕೆ ನಿಸ್ವಾರ್ಥ ಸೇವೆ ನೀಡುತ್ತಿದ್ದು, ಸಂಸ್ಥೆಯಿಂದ ದೊರಕುವ ಸೇವೆ-ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ಉಪನ್ಯಾಸ, ಸನ್ಮಾನ

ಡಾ. ಜಿ.ಶಂಕರ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್​ಕ್ರಾಸ್​ ಸಂಯೋಜಕಿ ಡಾ. ದಿವ್ಯಾ ಎಂ.ಎಸ್​., ಭಾರತೀಯ ರೆಡ್​ಕ್ರಾಸ್​ನ ಕೊಡುಗೆ ಕುರಿತು ಉಪನ್ಯಾಸ ನೀಡಿದರು. ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ನಿತ್ಯಾನಂದ ಒಳಕಾಡು, ನಿರುಪಮಾ ಪ್ರಸಾದ ಮತ್ತು ಭಾರತಿ ಅವರನ್ನು ಸನ್ಮಾನಿಸಲಾಯಿತು. 15 ಫಲಾನುಭವಿಗಳಿಗೆ ಗಾಲಿಕುರ್ಚಿ, ತಲಾ 10 ಫಲಾನುಭವಿಗಳಿಗೆ ಶ್ರವಣ ಸಾಧನ, ಗೃಹಪಯೋಗಿ ವಸ್ತು ಹಾಗೂ ವಿವಿಧ ಶಾಲಾ-ಕಾಲೇಜುಗಳಿಗೆ ಪ್ರಥಮ ಚಿಕಿತ್ಸಾ ಕಿಟ್​ ವಿತರಿಸಲಾಯಿತು.

ಜಿಲ್ಲಾ ರೆಡ್​ಕ್ರಾಸ್​ ಸಂಸ್ಥೆಯ ಉಪಸಭಾಪತಿ ಅಶೋಕ ವೈ.ಜಿ., ಆಡಳಿತ ಮಂಡಳಿಯ ಸದಸ್ಯ ಚಂದ್ರಶೇಖರ, ನಿಕಟಪೂರ್ವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಭಾರತೀಯ ರೆಡ್​ಕ್ರಾಸ್​ ಸಂಸ್ಥೆಯ ಜಿಲ್ಲಾ ಸದಸ್ಯ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಸ್ವಾಗತಿಸಿ, ನಿರೂಪಿಸಿದರು. ಗೌರವ ಖಜಾಂಚಿ ರಮಾದೇವಿ ವಂದಿಸಿದರು.

ಜಗತ್ತಿನಲ್ಲಿ ಶಾಂತಿ ಕಾಪಾಡುವಲ್ಲಿ ರೆಡ್​ಕ್ರಾಸ್​ ಕೊಡುಗೆ ಸ್ಮರಣೀಯ. ಕಷ್ಟದಲ್ಲಿರುವವರಿಗೆ ನ್ಯಾಯಯುತ ಸಹಾಯ ಮಾಡುವ ಕೆಲಸ ಮಾಡುತ್ತಲೇ ಇದೆ. ಶಾಂತಿ ಮತ್ತು ಮಾನವೀಯ ಮೌಲ್ಯಕ್ಕೆ ಪ್ರತಿಯೊಬ್ಬರ ಒಲವಿರಬೇಕು. ಒಳ್ಳೆಯ ಯೋಚನೆಗಳಿಂದ ಸಮಾಜದಲ್ಲಿ ಅನೇಕ ಬದಲಾವಣೆ ತರಲು ಸಾಧ್ಯ.
| ಅಬೀದ ಗದ್ಯಾಳ. ಅಪರ ಜಿಲ್ಲಾಧಿಕಾರಿ.

Share This Article
blank

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

ದಿನವಿಡೀ ಮೊಬೈಲ್​ ನೋಡ್ತಾನೇ ಇರ್ತೀರಾ? ಈ ಚಟದಿಂದ ಹೊರ ಬರಲು ಇದೇ ಸರಳ ಮಾರ್ಗ…mobile

mobile: ಇಂದಿನ ಡಿಜಿಟಲ್ ಜಗತ್ತಿನಲ್ಲಿ, ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಟಿವಿಗಳು ನಮ್ಮ ದೈನಂದಿನ ಜೀವನದ ಅವಿಭಾಜ್ಯ…

blank