More

    ಹೊಸ ನೋಟುಗಳಲ್ಲಿ ಲಕ್ಷ್ಮೀ ಮತ್ತು ಗಣೇಶನ ಫೋಟೋ ಮುದ್ರಿಸುವಂತೆ ಪ್ರಧಾನಿ ಮೋದಿಗೆ ಕೇಜ್ರಿವಾಲ್​ ಮನವಿ!

    ನವದೆಹಲಿ: ಹೊಸದಾಗಿ ಮುದ್ರಣವಾಗುವ ನೋಟುಗಳಲ್ಲಿ ಲಕ್ಷ್ಮೀ ದೇವತೆ ಮತ್ತು ಭಗವಾನ್​ ಗಣಪತಿಯ ಫೋಟೋಗಳನ್ನು ಸೇರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಅವರು ಪ್ರಧಾನಿ ನರೇಂದ್ರ ಬಳಿ ಮನವಿ ಮಾಡಿಕೊಂಡಿದ್ದಾರೆ.

    ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅರವಿಂದ್​ ಕೇಜ್ರಿವಾಲ್​, ಹೊಸ ನೋಟುಗಳಲ್ಲಿ ಒಂದು ಕಡೆ ಮಹಾತ್ಮ ಗಾಂಧಿ ಫೋಟೋ ಸಹ ಇರಲಿ ಮತ್ತು ಇನ್ನೊಂದು ಕಡೆ ಗಣೇಶ ಹಾಗೂ ಲಕ್ಷ್ಮೀಯ ಫೋಟೋ ಸಹ ಇರಲಿ ಎಂದು ಪ್ರಧಾನಿ ಮೋದಿಗೆ ಸಲಹೆ ನೀಡಿದ್ದಾರೆ.

    ನೋಟುಗಳ ಮೇಲೆ ಈ ಎರಡು ಹಿಂದು ದೇವರುಗಳ ಫೋಟೋ ಹಾಕುವುದರಿಂದ ದೇಶದ ಏಳಿಗೆಗೆ ನೆರವಾಗಲಿದೆ ಮತ್ತು ಆರ್ಥಿಕ ಸಂಕಷ್ಟದಿಂದ ಪಾರಾಗಬಹುದು ಎಂದು ಅರವಿಂದ್​ ಕೇಜ್ರಿವಾಲ್​ ಅಭಿಪ್ರಾಯಪಟ್ಟಿದ್ದಾರೆ.

    ಸಾಕಷ್ಟು ಶ್ರಮ ಅಥವಾ ಪ್ರಯತ್ನಗಳನ್ನು ಮಾಡಿದರೂ ಕೆಲವೊಮ್ಮೆ ದೇವರ ಆಶೀರ್ವಾದ ಇಲ್ಲದಿದ್ದರೆ, ನಮ್ಮ ಶ್ರಮವೆಲ್ಲ ವ್ಯರ್ಥವಾಗುತ್ತವೆ. ಹೀಗಾಗಿ ಹೊಸದಾಗಿ ಮುದ್ರಣವಾಗುವ ನೋಟುಗಳಲ್ಲಿ ಗಣೇಶ ಮತ್ತು ಲಕ್ಷ್ಮೀ ಫೋಟೋಗಳನ್ನು ಮುದ್ರಿಸುವಂತೆ ನಾನು ಪ್ರಧಾನಿ ಮೋದಿ ಅವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಕೇಜ್ರಿವಾಲ್​ ಹೇಳಿದ್ದಾರೆ. (ಏಜೆನ್ಸೀಸ್​)

    ಬಂಡೇ ಮಠದ ಬಸವಲಿಂಗ ಶ್ರೀ ಸಾವು ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಮಹಿಳೆ ಜತೆಗಿನ ವಿಡಿಯೋ ಕಾಲ್!​

    ಎಐಸಿಸಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮಲ್ಲಿಕಾರ್ಜುನ ಖರ್ಗೆ: ಅಭಿನಂದನೆ ಸಲ್ಲಿಸಿದ ಸೋನಿಯಾ ಗಾಂಧಿ

    ಹಂಪಿಯಲ್ಲಿ ಕಳೆದುಕೊಂಡಿದ್ದ 2 ದುಬಾರಿ ಐಫೋನ್​ಗಳನ್ನು ಯುವತಿಯರಿಬ್ಬರಿಗೆ ಮರಳಿಸಿದ ಪ್ರವಾಸಿ ಮಿತ್ರರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts