ಮುಂಬೈ: ನ್ಯಾಷನಲ್ ಕಾಂಗ್ರೆಸ್ ಪಾರ್ಟಿ ಮುಖ್ಯಸ್ಥ ಶರದ್ ಪವಾರ್ಗೆ ಆದಾಯ ತೆರಿಗೆ ಇಲಾಖೆಯು ನೋಟಿಸ್ ನೀಡಿದ್ದು, ಇದೀಗ ಮುಂದಿನ ಬೆಳವಣಿಗೆಗಳ ಬಗ್ಗೆ ಕುತೂಹಲ ಮೂಡುವಂತೆ ಮಾಡಿದೆ.
ಆದಾಯ ತೆರಿಗೆ ಇಲಾಖೆಯ ನೋಟಿಸ್ ಬಂದಿರುವುದನ್ನು ಸ್ವತಃ ಶರದ್ ಪವಾರ್ ಮಂಗಳವಾರ ಸ್ಪಷ್ಟಪಡಿಸಿದ್ದಾರೆ. ಚುನಾವಣೆ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್ ಹಿನ್ನೆಲೆಯಲ್ಲಿ ನೋಟಿಸ್ ಬಂದಿದ್ದು, ಇಲಾಖೆ ಸ್ಪಷ್ಟನೆ ಹಾಗೂ ವಿವರಣೆ ಕೋರಿದೆ ಎಂದು ಅವರೇ ಸುದ್ದಿಗಾರರಿಗೆ ತಿಳಿಸಿದ್ದಾರೆ.
‘ನಿನ್ನೆ ನನಗೆ ನೋಟಿಸ್ ಬಂದಿದೆ. ಎಲ್ಲರ ನಡುವೆ ಕೇಂದ್ರ ಸರ್ಕಾರ ನಮ್ಮನ್ನು ಪ್ರೀತಿಸುತ್ತಿದೆ ಎಂಬ ಬಗ್ಗೆ ನಮಗೆ ಸಂತೋಷವಿದೆ. ನಾವು ನೋಟಿಸ್ಗೆ ಉತ್ತರ ನೀಡುತ್ತೇವೆ’ ಎಂಬುದಾಗಿ ಶರದ್ ಪವಾರ್ ಹೇಳಿದ್ದಾರೆ. ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಲೆ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಐಟಿ ನೋಟಿಸ್ ಜಾರಿಯಾಗಿದೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಅವರು ಸುದ್ದಿಗಾರರಿಗೆ ಈ ಪ್ರತಿಕ್ರಿಯೆ ನೀಡಿದ್ದರು. (ಏಜೆನ್ಸೀಸ್)