More

    ಶರದ್ ಪವಾರ್​ಗೆ ಆದಾಯ ತೆರಿಗೆ ನೋಟಿಸ್​.. ಸ್ಪಷ್ಟನೆ ಕೋರಿದ ಇಲಾಖೆ..

    ಮುಂಬೈ: ನ್ಯಾಷನಲ್ ಕಾಂಗ್ರೆಸ್​ ಪಾರ್ಟಿ ಮುಖ್ಯಸ್ಥ ಶರದ್ ಪವಾರ್​ಗೆ ಆದಾಯ ತೆರಿಗೆ ಇಲಾಖೆಯು ನೋಟಿಸ್​ ನೀಡಿದ್ದು, ಇದೀಗ ಮುಂದಿನ ಬೆಳವಣಿಗೆಗಳ ಬಗ್ಗೆ ಕುತೂಹಲ ಮೂಡುವಂತೆ ಮಾಡಿದೆ.

    ಆದಾಯ ತೆರಿಗೆ ಇಲಾಖೆಯ ನೋಟಿಸ್​ ಬಂದಿರುವುದನ್ನು ಸ್ವತಃ ಶರದ್ ಪವಾರ್ ಮಂಗಳವಾರ ಸ್ಪಷ್ಟಪಡಿಸಿದ್ದಾರೆ. ಚುನಾವಣೆ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್​ ಹಿನ್ನೆಲೆಯಲ್ಲಿ ನೋಟಿಸ್​ ಬಂದಿದ್ದು, ಇಲಾಖೆ ಸ್ಪಷ್ಟನೆ ಹಾಗೂ ವಿವರಣೆ ಕೋರಿದೆ ಎಂದು ಅವರೇ ಸುದ್ದಿಗಾರರಿಗೆ ತಿಳಿಸಿದ್ದಾರೆ.

    ‘ನಿನ್ನೆ ನನಗೆ ನೋಟಿಸ್ ಬಂದಿದೆ. ಎಲ್ಲರ ನಡುವೆ ಕೇಂದ್ರ ಸರ್ಕಾರ ನಮ್ಮನ್ನು ಪ್ರೀತಿಸುತ್ತಿದೆ ಎಂಬ ಬಗ್ಗೆ ನಮಗೆ ಸಂತೋಷವಿದೆ. ನಾವು ನೋಟಿಸ್​ಗೆ ಉತ್ತರ ನೀಡುತ್ತೇವೆ’ ಎಂಬುದಾಗಿ ಶರದ್ ಪವಾರ್ ಹೇಳಿದ್ದಾರೆ. ಶರದ್​ ಪವಾರ್​ ಪುತ್ರಿ ಸುಪ್ರಿಯಾ ಸುಲೆ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆಗೆ ಐಟಿ ನೋಟಿಸ್​ ಜಾರಿಯಾಗಿದೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಅವರು ಸುದ್ದಿಗಾರರಿಗೆ ಈ ಪ್ರತಿಕ್ರಿಯೆ ನೀಡಿದ್ದರು. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts