More

    ರಾಜ್ಯದಲ್ಲಿ ಮತ್ತೆ ಐಟಿ ಸದ್ದು; ಮಾಜಿ ಸಚಿವರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ

    ಚಿತ್ರದುರ್ಗ: ರಾಜ್ಯದಲ್ಲಿ ಆಗಾಗ ಕೇಳಿ ಬರುತ್ತಿರುವ ಐಟಿ ಸದ್ದು ಮತ್ತೊಮ್ಮೆ ಮೊಳಗಿದೆ. ಅರ್ಥಾತ್, ರಾಜ್ಯದ ಮಾಜಿ ಸಚಿವರೊಬ್ಬರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಐಟಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.

    ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಪಾಡಿಗಟ್ಟೆ ಗ್ರಾಮದಲ್ಲಿನ ಜಿಲ್ಲಾ ಕಾಂಗ್ರೆಸ್​ ಕಾರ್ಯದರ್ಶಿ ಪಾಡಿಗಟ್ಟೆ ಸುರೇಶ್ ಮತ್ತು ಆತನ ಸಹೋದರ, ಗುತ್ತಿಗೆದಾರನೂ ಆಗಿರುವ ತಿಪ್ಪೇಸ್ವಾಮಿ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುರೇಶ್ ಮಾಜಿ ಸಚಿವ ಎಚ್. ಆಂಜನೇಯ ಅವರ ಆಪ್ತ.

    ಆದಾಯ ತೆರಿಗೆ ಅಧಿಕಾರಿಗಳ ತಂಡ ಹುಬ್ಬಳ್ಳಿಯಿಂದ ಬಂದು ದಾಳಿ ನಡೆಸಿದ್ದು, ಸುರೇಶ್ ಮನೆಯಲ್ಲಿ ಜಾಲಾಡಿದೆ. ಆದಾಯಕ್ಕೆ ಮೀರಿದ ಹಣ, ಆಸ್ತಿ ಗಳಿಕೆ ಮಾಹಿತಿಯ ಹಿನ್ನೆಲೆಯಲ್ಲಿ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

    ರಾಜ್ಯದಲ್ಲಿ ಮತ್ತೆ ಐಟಿ ಸದ್ದು; ಮಾಜಿ ಸಚಿವರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ

    ಸಂಸಾರ ನಿಭಾಯಿಸಲಿಕ್ಕೂ ಇಲ್ಲಿದೆ ಒಂದು ಕೋರ್ಸ್​; ಮದುವೆ ಆಗುವವರಿಗೂ-ಆದವರಿಗೂ ನೀಡ್ತಾರೆ ತರಬೇತಿ!

    ಸರ್ವರೋಗಕ್ಕೂ ಇದೇ ಮದ್ದು!; ಚಿನ್ನಕ್ಕಿಂತಲೂ ದುಬಾರಿ ಈ ವಸ್ತು: ಇದಕ್ಕೆಂದೇ ಚೀನಾದವರು ಭಾರತದೊಳಕ್ಕೆ ನುಗ್ಗಿದ್ದಾರೆ ಹಲವು ಸಲ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts