ಸೊರಬ: ಸಮಾಜದಲ್ಲಿ ಬಂದೂಕು ತರಬೇತಿ ಅತ್ಯವಶ್ಯ. ಪ್ರತಿಯೊಬ್ಬರೂ ಶಿಬಿರದ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಪಟ್ಟಣದ ರಂಗಮಂದಿರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ನಾಗರಿಕ ಬಂದೂಕು ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅರ್ಹತಾ ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಅವರು, ಬಂದೂಕು ತರಬೇತಿಯಿಂದ ಸಾರ್ವಜನಿಕರಲ್ಲಿ ಜವಾಬ್ದಾರಿ ಹೆಚ್ಚಾಗಿದೆ ಎಂದರು.
ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಮಾತನಾಡಿ, ಜನಸಾಮಾನ್ಯರು ಸಾರ್ವಜನಿಕ ಜೀವನ ನಡೆಸುತ್ತಿರುವಾಗ ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು, ಅಹಿತಕರ ಘಟನೆಗಳು ನಡೆಯದಂತೆ ತಾಳ್ಮೆಯಿಂದ ವರ್ತಿಸಲು ಇದೊಂದು ಕಲಿಕೆಯ ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು.
ಎಸ್ಪಿ ಜಿ.ಕೆ.ಮಿಥುನ್ಕುಮಾರ್ ಮಾತನಾಡಿ, ಸಾರ್ವಜನಿಕರಲ್ಲಿ ಪೊಲೀಸರ ಬಗ್ಗೆ ಕೆಲವರು ತಪ್ಪು ಅಭಿಪ್ರಾಯ ಹರಡುತ್ತಾರೆ. ಅದಕ್ಕೆ ಕಿವಿಗೊಡದೆ ಪೊಲೀಸ್ ಇಲಾಖೆ ಜತೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
12 ದಿನಗಳ ಕಾಲ ಬಂದೂಕು ತರಬೇತಿ ಪಡೆದವರಿಗೆ ಅರ್ಹರಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಸಾಗರ ಎಸಿ ದೃಷ್ಟಿ ಜೈಸ್ವಾಲ್, ತರಬೇತುದಾರರಾದ ಪಿಎಸ್ಐ ಮಂಜುನಾಥ, ಹೆಡ್ ಕಾನ್ಸ್ಟೆಬಲ್ಗಳಾದ ಲಕ್ಷ್ಮೀಕಾಂತ, ಪ್ರವೀಣ್ಕುಮಾರ್, ರಾಘವೇಂದ್ರ ಇತರರಿದ್ದರು.
ಬಂದೂಕು ತರಬೇತಿಯಿಂದ ಜವಾಬ್ದಾರಿ ಹೆಚ್ಚಳ

You Might Also Like
ಸಂಜೆ ಉಪ್ಪನ್ನು ದಾನ ಮಾಡುವುದು ಒಳ್ಳೆಯದಲ್ಲ! ಮನೆಯಲ್ಲಿ ಎದುರಾಗುತ್ತದೆ ಹಣದ ಸಮಸ್ಯೆ..salt
salt : ಉಪ್ಪು ಅಡುಗೆಯಲ್ಲಿ ಕೇವಲ ರುಚಿ ಹೆಚ್ಚಿಸುವ ವಸ್ತುವಲ್ಲ. ವಾಸ್ತು ಶಾಸ್ತ್ರದ ಪ್ರಕಾರ, ಇದು ಮನೆಯಲ್ಲಿ…
ನವವಿವಾಹಿತರಿಗೆ ಈ ಉಡುಗೊರೆಗಳನ್ನು ಎಂದಿಗೂ ನೀಡಬೇಡಿ! ಜೀವನ ಹಾಳಾಗುತ್ತದೆ… gifts
gifts: ಹೊಸದಾಗಿ ಮದುವೆಯಾದ ಹೆಣ್ಣುಮಗಳಿಗೆ ಉಡುಗೊರೆಗಳನ್ನು ನೀಡುವುದು ಸಾಮಾನ್ಯ. ತಾಯಿಯ ಮನೆಯಿಂದ ಮಗಳಿಗೆ ಕೆಲವು ರೀತಿಯ…
ಈ ಸುಡುವ ಬಿಸಿಲಿನಲ್ಲಿ ಐಸ್ ಕ್ರೀಮ್ ತಿನ್ನುವುದರಿಂದ ನಿಜವಾಗಿಯೂ ದೇಹ ತಂಪಾಗುತ್ತದೆಯೇ? ice cream
ice cream: ನಾವು ಒಂದು ಚಮಚ ಐಸ್ ಕ್ರೀಮ್ ಅನ್ನು ಬಾಯಿಯಲ್ಲಿ ಇಟ್ಟ ತಕ್ಷಣ ತಂಪನ್ನು…