blank

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ

blank

ಮುಂಡಗೋಡ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳು ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ತಹಸೀಲ್ದಾರ್ ಕಚೇರಿಯ ಎದುರು ಗುರುವಾರ ಆರಂಭಿಸಿದ್ದಾರೆ.

blank

ತಹಸೀಲ್ದಾರ್ ಕಚೇರಿಯ ಎದುರು ಕೈಗೆ ಕಪ್ಪು ಪಟ್ಟಿ ಧರಿಸಿಕೊಂಡು ಬೆಳಗ್ಗೆಯಿಂದ ಅನಿರ್ಧಿಷ್ಠಾವಧಿ ಸತ್ಯಾಗ್ರಹ ಕುಳಿತಿದ್ದು, ಗ್ರಾಮ ಆಡಳಿತ ಅಧಿಕಾರಿಗೆ ಸುಸಜ್ಜಿತವಾದ ಕಚೇರಿ, ಗುಣಮಟ್ಟದ ಟೇಬಲ್, ಖುರ್ಚಿ,ಅಲ್ಮೇರಾ, ಮೊಬೈಲ್, ಪ್ರಿಂಟರ್, ಸ್ಕಾ್ಯನರ್ ಸೇರಿ ವಿವಿಧ ಬೇಡಿಕೆ ಈಡೇರಿಸಬೇಕು ಹಾಗೂ ಶಿಷ್ಟಾಚಾರ ಕೆಲಸದಿಂದ ನಮ್ಮನ್ನು ಕೈ ಬಿಡಲು ಆದೇಶ ಮಾಡಬೇಕು. ಅನ್ಯ ಇಲಾಖೆಯ ಕೆಲಸ ನಿರ್ವಹಿಸದಂತೆ ಸೂಕ್ತ ಆದೇಶ ನೀಡಬೇಕು, ಹಾಲಿ ಇರುವ ರ್ಯಾಕಿಂಗ್ ವ್ಯವಸ್ಥೆ ಕೈ ಬಿಡಬೇಕು, ಮೋಟೇಶನ್ ಅವಧಿ ವಿಸ್ತರಿಸಬೇಕು ರಾಜ್ಯದ ಗ್ರಾಮ ಸಹಾಯಕರಿಗೆ ಸೇವಾ ಭದ್ರತೆ ಒದಗಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ.

blank

ಗೋಣಿಬಸಪ್ಪ ಕೊರಚರ, ಶಿವಾನಂದ ನಾಯ್ಕ, ಕಾವೇರಿ ಶಿಂಧೆ, ಗೋಪಾಲ ಎಂ., ಹನುಮಂತ ಕಡಕೋಳ, ಶಿವರಾಜ ಸೂರಿನ್, ಗಿರೀಶ ರಣದೇವ,ಪವಿತ್ರಾ ಕೆ.ವಿ., ಇದ್ದರು.

Share This Article

ಮಿದುಳಿನ ಆರೋಗ್ಯ ರಕ್ಷಣೆಗೆ ನಾವೇನು ಮಾಡಬೇಕು?

ಇಂದು ಕೃತಕ ಬುದ್ಧಿಮತ್ತೆ ಕೂಡ ನಮ್ಮ ಕೈಯಲ್ಲಿದೆ. ಆದರೆ ದುರದೃಷ್ಟವಶಾತ್ ನಮ್ಮ ಮಿದುಳಿನ ಆರೋಗ್ಯ ದಿನೇ…

ರಾತ್ರಿ ಮಲಗುವ ಮುನ್ನ ಪಾತ್ರೆಗಳನ್ನು ತೊಳೆದಿಡಬೇಕು ಯಾಕೆ ಗೊತ್ತಾ?; ಇದಕ್ಕೆ ವೈಜ್ಞಾನಿಕ ಕಾರಣವೂ ಇದೆ | Reason Behind

ಹಿಂದೂ ಧರ್ಮಗ್ರಂಥಗಳಲ್ಲಿ ನಮ್ಮ ಸೌಕರ್ಯ, ಅದೃಷ್ಟ ಮತ್ತು ಆರೋಗ್ಯದ ಬಗ್ಗೆ ಅನೇಕ ನಿಯಮಗಳನ್ನು ಉಲ್ಲೇಖಿಸಲಾಗಿದೆ. ಅದನ್ನು…

ಶೀತ-ಕೆಮ್ಮಿನಿಂದ ಬಳಲುತ್ತಿದ್ದೀರಾ?; ಈ ಮನೆಮದ್ದು ಬಳಸಿ ಸಮಸ್ಯೆಗೆ ಗುಡ್​ಬೈ ಹೇಳಿ | Health Tips

ಚಳಿಗಾಲದಲ್ಲಿ ದುರ್ಬಲ ರೋಗನಿರೋಧಕ ಶಕ್ತಿಯಿಂದಾಗಿ ಶೀತ, ಕೆಮ್ಮು, ಗಂಟಲು ನೋವು, ಎದೆನೋವು, ನೆಗಡಿ, ತಲೆನೋವು ಮುಂತಾದ…