ಕೊಲ್ಕತ್ತ: ಮತದಾನ ಪೂರ್ವ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ ಇದೀಗ ತೀವ್ರ ರೂಪ ಪಡೆದಿದ್ದು, ಟಿಎಂಸಿಯ ಮುಖಂಡನೋರ್ವ ಪಕ್ಷೇತರ ಅಭ್ಯರ್ಥಿಯ ಪುತ್ರಿಯ ಹಣೆಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಹೂಗ್ಲಿ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಚಂದನಾ ಸಿಂಗ್(20) ಎಂದು ಗುರುತಿಸಲಾಗಿದ್ದು, ಈಕೆಯ ತಂದೆ ಪಿಂಟು ಸಿಂಗ್ ಟಿಎಂಸಿ ಪಕ್ಷದಿಂದ ಟಿಕೆಟ್ ನಿರಾಕರಿಸಿ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
ಹಣೆಗೆ ಗುಂಡಿಕ್ಕಿ ಹತ್ಯೆ
ತಮ್ಮ ಮಗಳನ್ನು ಹತ್ಯೆ ಮಾಡಿರುವ ಕುರಿತು ಮಾತನಾಡಿರುವ ಪಿಂಟು ಸಿಂಗ್ ಗುಂಪೊಂದು ಏಕಾಏಕಿ ನಮ್ಮ ಮನೆಗೆ ನುಗ್ಗಿ ನನ್ನ ಮಗಳ ಹಣೆಗೆ ಗುಂಡಿಟ್ಟು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಈ ಕುರಿತು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು ಯಾರು ಯಾರು ಸಹ ಪ್ರಕರಣ ದಾಖಲಿಸಿಕೊಳ್ಳಲು ಮುಂದೆ ಬರುತ್ತಿಲ್ಲ.
ಇದನ್ನೂ ಓದಿ: VIDEO| ಮಗನ ಮೃತದೇಹ ಹಸ್ತಾಂತರಿಸಲು ನಿರಾಕರಿಸಿದ ತಾಯಿಯ ಕಪಾಳಕ್ಕೆ ಹೊಡೆದ ಪೊಲೀಸ್
ಈ ಹಿಂದೆ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಎಂದಿ ಪಕ್ಷದಿಂದ ಟಕೆಟ್ ಬಯಸಿದ್ದೆ. ಆದರೆ, ಟಿಕೆಟ್ ನೀಡದ ಕಾರಣ ನಾನು ಪಕ್ಷೇತರನಾಗಿ ಕಣಕ್ಕಿಳಿದ ಕಾರಣ ಈ ರೀತಿ ಮಾಡಲಾಗಿದೆ. ಮಗಳ ಸಾವಿಗೆ ನ್ಯಾಯ ದೊರೆಕುವವರೆಗೂ ನಮ್ಮ ಹಜೋರಾಟ ನಿಲ್ಲುವುದಿಲ್ಲ ಎಂದು ಮೃತ ಯುವತಿಯ ತಂದೆ ಪಿಂಟು ಸಿಂಗ್ ಹೇಳಿದ್ದಾರೆ.
ಘಟನೆ ನಡೆದ ಸ್ಥಳದಲ್ಲಿ ಬುಲೆಟ್ ಹಾಗೂ ಬಾಂಬ್ ಶೆಲ್ಗಳು ಪತ್ತೆಯಾಗಿದ್ದು, ಈ ಕುರಿತು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಅದನ್ನು ವಶಪಡಿಸಿಕೊಳ್ಳುವಂತೆ ಹೇಳಿದರು ಸಹ ಯಾವುದೇ ತ್ವರಿತ ಕ್ರಮ ಕೈಗೊಳ್ಳದೆ ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.