More

    ಸೇನೆ ಹಿಂತೆಗೆಯಬೇಕು: ಉಭಯ ರಾಷ್ಟ್ರಗಳ ಒಮ್ಮತಾಭಿಪ್ರಾಯ

    ನವದೆಹಲಿ: ಲಡಾಖ್​ನ ಪೂರ್ವ ಭಾಗದ ನಾಲ್ಕು ಪ್ರದೇಶಗಳಲ್ಲಿ ಪರಸ್ಪರ ಬಿರುಗಣ್ಣು ಬಿಟ್ಟುಕೊಂಡು ಕೂತಿರುವ ಭಾರತ ಮತ್ತು ಚೀನಾದ ಸೇನೆಯನ್ನು ಹಿಂತೆಗೆಯಬೇಕು ಎಂಬ ವಿಷಯವಾಗಿ ಭಾರತ ಮತ್ತು ಚೀನಾಗಳ ನಡುವೆ ಒಮ್ಮತಾಭಿಪ್ರಾಯ ವ್ಯಕ್ತವಾಗಿದೆ.

    ಭಾನುವಾರ ನಡೆದ ಭಾರತ ಮತ್ತು ಚೀನಾದ ಕೋರ್​ ಕಮಾಂಡರ್​ ಮಟ್ಟದ ಸಭೆಯಲ್ಲಿ ಇಂಥ ಒಮ್ಮತಾಭಿಪ್ರಾಯ ಮೂಡಿದ್ದಾಗಿ ಭಾರತೀಯ ಸೇನಾಪಡೆ ಮೂಲಗಳು ತಿಳಿಸಿವೆ.

    ಇದನ್ನೂ ಓದಿ: ಟಿಬೆಟ್​ನಲ್ಲಿ ನದಿ ಹರಿವಿನ ದಿಕ್ಕನ್ನೇ ಬದಲಿಸಿರುವ ಚೀನಾ, ನೇಪಾಳ ಬಹುತೇಕ ಭಾಗ ಕಬಳಿಕೆ

    ಇದೀಗ ವಾಸ್ತವ ಗಡಿರೇಖೆಯ ನಾಲ್ಕು ಕಡೆಗಳಲ್ಲಿ ನಿಯೋಜಿಸಿರುವ ಸೇನಾಪಡೆಯನ್ನು ಹಿಂಪಡೆಯುವ ಕ್ರಮಗಳ ಕುರಿತು ಚರ್ಚಿಸಲಾಗಿದೆ. ಈ ಬಗ್ಗೆ ಮಾತುಕತೆಗಳು ಮುಂದುವರಿಯಲಿವೆ ಎಂದು ಹೇಳಿವೆ.

    ಮಾತುಕತೆ ಅತ್ಯಂತ ಸೌಹಾರ್ದಯುತವಾಗಿ, ಸಕಾರಾತ್ಮಕವಾಗಿ ಮತ್ತು ರಚನಾತ್ಮಕವಾಗಿ ನಡೆದಿದ್ದಾಗಿ ತಿಳಿಸಿವೆ.

    ಇದೇ ವೇಳೆ, 14 ಕೋರ್​ ಅಧಿಕಾರಿಗಳನ್ನು ಭೇಟಿಯಾಗಿ ಮಾತುಕತೆಯ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಳ್ಳುವ ಜತೆಗೆ ವಾಸ್ತವ ಪರಿಸ್ಥಿತಿಯನ್ನು ಅರಿತುಕೊಳ್ಳಲು ಸೇನಾಪಡೆ ಮುಖ್ಯಸ್ಥ ಜನರಲ್​ ಎಂ.ಎಂ. ನರವಾನೆ ಈಗಾಗಲೆ ಲಡಾಖ್​ಗೆ ತೆರಳಿದ್ದಾರೆ.

    ಗಲ್ವಾನ್ ಕಣಿವೆ ಸಂಘರ್ಷ: ಅಮೆರಿಕ ಗುಪ್ತಚರ ವರದಿ ಬಿಚ್ಚಿಟ್ಟ ರಹಸ್ಯವೇನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts