ನವದೆಹಲಿ: ಲಡಾಖ್ನ ಪೂರ್ವ ಭಾಗದ ನಾಲ್ಕು ಪ್ರದೇಶಗಳಲ್ಲಿ ಪರಸ್ಪರ ಬಿರುಗಣ್ಣು ಬಿಟ್ಟುಕೊಂಡು ಕೂತಿರುವ ಭಾರತ ಮತ್ತು ಚೀನಾದ ಸೇನೆಯನ್ನು ಹಿಂತೆಗೆಯಬೇಕು ಎಂಬ ವಿಷಯವಾಗಿ ಭಾರತ ಮತ್ತು ಚೀನಾಗಳ ನಡುವೆ ಒಮ್ಮತಾಭಿಪ್ರಾಯ ವ್ಯಕ್ತವಾಗಿದೆ.
ಭಾನುವಾರ ನಡೆದ ಭಾರತ ಮತ್ತು ಚೀನಾದ ಕೋರ್ ಕಮಾಂಡರ್ ಮಟ್ಟದ ಸಭೆಯಲ್ಲಿ ಇಂಥ ಒಮ್ಮತಾಭಿಪ್ರಾಯ ಮೂಡಿದ್ದಾಗಿ ಭಾರತೀಯ ಸೇನಾಪಡೆ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಟಿಬೆಟ್ನಲ್ಲಿ ನದಿ ಹರಿವಿನ ದಿಕ್ಕನ್ನೇ ಬದಲಿಸಿರುವ ಚೀನಾ, ನೇಪಾಳ ಬಹುತೇಕ ಭಾಗ ಕಬಳಿಕೆ
ಇದೀಗ ವಾಸ್ತವ ಗಡಿರೇಖೆಯ ನಾಲ್ಕು ಕಡೆಗಳಲ್ಲಿ ನಿಯೋಜಿಸಿರುವ ಸೇನಾಪಡೆಯನ್ನು ಹಿಂಪಡೆಯುವ ಕ್ರಮಗಳ ಕುರಿತು ಚರ್ಚಿಸಲಾಗಿದೆ. ಈ ಬಗ್ಗೆ ಮಾತುಕತೆಗಳು ಮುಂದುವರಿಯಲಿವೆ ಎಂದು ಹೇಳಿವೆ.
ಮಾತುಕತೆ ಅತ್ಯಂತ ಸೌಹಾರ್ದಯುತವಾಗಿ, ಸಕಾರಾತ್ಮಕವಾಗಿ ಮತ್ತು ರಚನಾತ್ಮಕವಾಗಿ ನಡೆದಿದ್ದಾಗಿ ತಿಳಿಸಿವೆ.
ಇದೇ ವೇಳೆ, 14 ಕೋರ್ ಅಧಿಕಾರಿಗಳನ್ನು ಭೇಟಿಯಾಗಿ ಮಾತುಕತೆಯ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಳ್ಳುವ ಜತೆಗೆ ವಾಸ್ತವ ಪರಿಸ್ಥಿತಿಯನ್ನು ಅರಿತುಕೊಳ್ಳಲು ಸೇನಾಪಡೆ ಮುಖ್ಯಸ್ಥ ಜನರಲ್ ಎಂ.ಎಂ. ನರವಾನೆ ಈಗಾಗಲೆ ಲಡಾಖ್ಗೆ ತೆರಳಿದ್ದಾರೆ.
ಗಲ್ವಾನ್ ಕಣಿವೆ ಸಂಘರ್ಷ: ಅಮೆರಿಕ ಗುಪ್ತಚರ ವರದಿ ಬಿಚ್ಚಿಟ್ಟ ರಹಸ್ಯವೇನು?