More

    ಪ್ರಸಿದ್ಧ ಕೃಷ್ಣ ದಾಳಿಗೆ ವಿಂಡೀಸ್ ಉಡೀಸ್ ; ಭಾರತಕ್ಕೆ ಒಲಿದ ಏಕದಿನ ಸರಣಿ

    ಅಹಮದಾಬಾದ್: ಕರ್ನಾಟಕದ ಯುವ ವೇಗಿ ಪ್ರಸಿದ್ಧಕೃಷ್ಣ (12ಕ್ಕೆ 4) ಮಾರಕ ಬೌಲಿಂಗ್ ದಾಳಿ ನೆರವಿನಿಂದ ಭಾರತ ತಂಡ 2ನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ವೆಸ್ಟ್ ಇಂಡೀಸ್ ತಂಡವನ್ನು 44 ರನ್‌ಗಳಿಂದ ಮಣಿಸಿತು. ಈ ಮೂಲಕ ರೋಹಿತ್ ಶರ್ಮ ಸಾರಥ್ಯ ಮತ್ತು ಕನ್ನಡಿಗ ರಾಹುಲ್ ದ್ರಾವಿಡ್ ಮಾರ್ಗದರ್ಶನದ ತಂಡ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿಯನ್ನು 2-0ಯಿಂದ ವಶಪಡಿಸಿಕೊಂಡಿತು. ವರ್ಷದಾರಂಭದಲ್ಲೇ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೆಸ್ಟ್ ಹಾಗೂ ಏಕದಿನ ಸರಣಿ ಸೋಲಿನಿಂದ ಕಂಗೆಟ್ಟಿದ್ದ ಟೀಮ್ ಇಂಡಿಯಾಗೆ ಈ ಸರಣಿ ಹೊಸ ಉತ್ಸಾಹವನ್ನು ತುಂಬಿದೆ.

    ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ, ಆರಂಭಿಕ ಆಘಾತದ ನಡುವೆ ಕನ್ನಡಿಗ ಕೆಎಲ್ ರಾಹುಲ್ (49 ರನ್, 48 ಎಸೆತ, 4 ಬೌಂಡರಿ, 2 ಸಿಕ್ಸರ್) ಹಾಗೂ ಸೂರ್ಯಕುಮಾರ್ ಯಾದವ್ (64ರನ್, 83 ಎಸೆತ, 5 ಬೌಂಡರಿ) ಆಸರೆಯಿಂದ 9 ವಿಕೆಟ್‌ಗೆ 237 ರನ್ ಪೇರಿಸಿತು. ಪ್ರತಿಯಾಗಿ ವಿಂಡೀಸ್ ತಂಡ ಪ್ರಸಿದ್ಧಕೃಷ್ಣ ಸಾರಥ್ಯದಲ್ಲಿ ಸಂಘಟಿಸಿದ ದಾಳಿಗೆ ನಲುಗಿ46 ಓವರ್‌ಗಳಲ್ಲಿ 193 ರನ್‌ಗಳಿಗೆ ಸರ್ವಪತನ ಕಂಡಿತು.

    ಭಾರತ: 9 ವಿಕೆಟ್‌ಗೆ 237 (ಕೆಎಲ್ ರಾಹುಲ್ 49, ಸೂರ್ಯಕುಮಾರ್ ಯಾದವ್ 64, ವಾಷಿಂಗ್ಟನ್ ಸುಂದರ್ 24, ದೀಪಕ್ ಹೂಡಾ 29, ಅಲ್ಜಾರಿ ಜೋಸೆಫ್  36ಕ್ಕೆ 2, ಒಡೆನ್ ಸ್ಮಿತ್ 29ಕ್ಕೆ 2), ವೆಸ್ಟ್ ಇಂಡೀಸ್: 46 ಓವರ್‌ಗಳಲ್ಲಿ 193 (ಶೈ ಹೋಪ್ 27, ಅಕೀಲ ಹೊಸೀನ್ 34, ಒಡೆನ್ ಸ್ಮಿತ್ 24, ಪ್ರಸಿದ್ಧ ಕೃಷ್ಣ 12ಕ್ಕೆ 4, ಶಾರ್ದೂಲ್ ಠಾಕೂರ್ 41ಕ್ಕೆ 2).

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts