ಜೋಹಾನ್ಸ್ಬರ್ಗ್: ಇಲ್ಲಿನ ನ್ಯೂ ವಾಂಡರರ್ಸ್ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಅತಿಥೇಯರು ವಿರುದ್ಧ ಟೀಂ ಇಂಡಿಯಾ 8 ವಿಕೆಟ್ಗಳ ಜಯಗಳಿಸಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್ನಲ್ಲಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಶುಭಾರಂಭ ಕಂಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅತಿಥೇಯರ ಮೇಲೆ ಕಡಿವಾಣ ಹೇರುವಲ್ಲಿ ಯಶ ಕಂಡ ಭಾರತದ ಬೌಲರ್ಗಳು ಎದುರಾಳಿ ತಂಡವನ್ನು 27.3 ಓವರ್ಗಳಲ್ಲಿ 116ಕ್ಕೆ ಆಲೌಟ್ ಮಾಡಿದೆ. ಭಾರತದ ಪರ ಅರ್ಷ್ದೀಪ್ ಸಿಂಗ್ (10-0-37-5), ಆವೇಶ್ ಖಾನ್ (8-3-27-4), ಮುಖೇಶ್ ಕುಮಾರ್ (7-0-46-0), ಕುಲ್ದೀಪ್ ಯಾದವ್ (2.3-3-1) ರನ್ ನೀಡಿ ವಿಕೆಟ್ ಪಡೆದಿದ್ದಾರೆ.
ಸುಲಭ ಗುರಿ ಬೆನ್ನತ್ತಿದ್ದ ಭಾರತ ತಂಡವು ಸಾಯಿ ಸುದರ್ಶನ್ (55 ರನ್, 43 ಎಸೆತ, 9 ಬೌಂಡರಿ), ಶ್ರೇಯಸ್ ಅಯ್ಯರ್ (52 ರನ್, 45 ಎಸೆತ, 6 ಬೌಂಡರಿ, 1 ಸಿಕ್ಸರ್) ಅರ್ಧಶತಕಗಲ ಫಲವಾಗಿ 16.4 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 117 ರನ್ಗಳನ್ನು ಗಳಿಸಿ ಗೆಲುವಿನ ನಗೆ ಬೀರಿತ್ತು. ವೇಗಿ ಅರ್ಷ್ದೀಪ್ ಸಿಂಗ್ ಅವರಿಗೆ ಪಂದ್ಯ ಪುರುಷೋತ್ತಮ ಪ್ರಶಸ್ತಿ ಲಭಿಸಿದೆ.