ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಶಂಕಿತ ಟೆರರ್ ಲಾಂಚ್ ಪ್ಯಾಡ್ಗಳ ಮೇಲೆ ಭಾರತ ಈಗ ನಡೆಸ್ತಿರೋದು ಸರ್ಜಿಕಲ್ ಸ್ಟ್ರೈಕ್ ಅಲ್ಲ. ಬದಲಾಗಿ ಪಿನ್ಪಾಯಿಂಟ್ ಸ್ರೈಕ್. ಉಗ್ರರನ್ನು ಭಾರತದೊಳಕ್ಕೆ ಕಳುಹಿಸುವುದಕ್ಕೆ ಪಾಕಿಸ್ತಾನ ಸೇನೆ ಗರಿಷ್ಠ ಮಟ್ಟದಲ್ಲಿ ಪ್ರಯತ್ನ ನಡೆಸುತ್ತಿದೆ. ಇದನ್ನು ತಡೆಯಲು ಸೇನೆ ಈ ಕ್ರಮ ತೆಗೆದುಕೊಂಡಿದೆ ಎಂದು ಸೇನಾಮೂಲಗಳು ಬಹಿರಂಗಪಡಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿರುವ ಶಂಕಿತ ಉಗ್ರ ಲಾಂಚ್ ಪ್ಯಾಡ್ಗಳ ಮೇಲೆ ಭಾರತೀಯ ಸೇನೆ ಪಿನ್ ಪಾಯಿಂಟ್ ಸ್ಟ್ರೈಕ್ ಮಾಡುತ್ತಿರುವ ಕಾರಣ ಪಾಕಿಸ್ತಾನ ಸೇನೆಗೆ ತಲ್ಲಣಗೊಂಡಿದೆ. ಅಲ್ಲದೆ ಹತರಾದ ಉಗ್ರರನ್ನು ಸ್ಥಳೀಯ ನಾಗರಿಕರು ಎಂದು ಬಿಂಬಿಸುತ್ತ ಜಾಗತಿಕ ಮಟ್ಟದಲ್ಲಿ ಅನುಕಂಪ ಗಿಟ್ಟಿಸಿಕೊಳ್ಳುವ ಪ್ರಯತ್ನವನ್ನು ಮಾಡುತ್ತಿದೆ. ಅಷ್ಟೇ ಅಲ್ಲ ವಿದೇಶ ದೇಣಿಗೆ ಪಡೆಯುವುದಕ್ಕೂ ಈ ಸನ್ನಿವೇಶವನ್ನು ಬಳಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಸರ್ಜಿಕಲ್ ಸ್ಟ್ರೈಕ್, ಬಾಲಕೋಟ್ ವೈಮಾನಿಕ ದಾಳಿಗಳು ಕೇವಲ ಮಿಲಿಟರಿ ಸ್ಟ್ರೈಕ್ ಅಲ್ಲ, ವಿರೋಧಿಗಳಿಗೆ ನೀಡಿದ ಸಂದೇಶ
ಉಗ್ರರಿಗೆ ಬೆಂಬಲ ನೀಡುತ್ತಿಲ್ಲ ಎಂದು ಪಾಕಿಸ್ತಾನ ಜಾಗತಿಕ ಮಟ್ಟದಲ್ಲಿ ಬಿಂಬಿಸಿಕೊಳ್ಳುತ್ತ, ಪಿಒಕೆ ಮೂಲಕ ಭಾರತಕ್ಕೆ ಉಗ್ರರನ್ನು ಕಳುಹಿಸಿ ಜಮ್ಮು-ಕಾಶ್ಮೀರದಲ್ಲಿ ಅಸ್ಥಿರತೆ ಉಂಟುಮಾಡಲು ನಿರಂತರ ಪ್ರಯತ್ನ ಮುಂದುವರಿಸಿದೆ. ಕಳೆದ ಕೆಲವು ವಾರದ ಅವಧಿಯಲ್ಲಿ ಗಡಿಭಾಗದ ಗ್ರಾಮಗಳ ಮೇಲೆ ಪಾಕ್ ಸೇನಾ ಪಡೆ ಗುಂಡಿನ ಸುರಿಮಳೆಗೈಯುತ್ತಿವೆ. ಪಿನ್ಪಾಯಿಂಟ್ ಸ್ಟ್ರೈಕ್ ಪರಿಣಾಮ ಚೆನ್ನಾಗಿದ್ದು, ಅದಕ್ಕೆ ಪಾಕ್ ಸೇನೆ ಈ ರೀತಿ ಪ್ರತಿಕ್ರಿಯಿಸುತ್ತಿದೆ ಎಂದು ಸೇನಾ ಮೂಲಗಳು ಸ್ಪಷ್ಟಪಡಿಸಿವೆ. (ಏಜೆನ್ಸೀಸ್)
ರಾಜ್ಯಸಭೆ ಉಪಚುನಾವಣೆ: ಪಾಸ್ವಾನ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಡಿ.14ಕ್ಕೆ ಮತದಾನ