ನನಕಾನಾ ಸಾಹಿಬ್​ ಗುರುದ್ವಾರದ ಮುಸ್ಲಿಂರ ವಿಧ್ವಂಸಕ ಕೃತ್ಯಕ್ಕೆ ತೀವ್ರ ಖಂಡನೆ; ಅಪ್​ಲೋಡ್​ ಮಾಡಿದ್ದ ಫೋಟೋ ಡಿಲಿಟ್​ ಮಾಡಿದ್ದೇಕೆ ಇಮ್ರಾನ್​ಖಾನ್​?

blank

ನವದೆಹಲಿ: ಪಾಕಿಸ್ತಾನದ ನನಕಾನಾ ಸಾಹಿಬ್​ ಗುರುದ್ವಾರದ ಮೇಲೆ ನಡೆದ ವಿಧ್ವಂಸಕ ಕೃತ್ಯವನ್ನು ಭಾರತ ಖಂಡಿಸಿದೆ.

blank

ಪಾಕಿಸ್ತಾನ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು. ಅಲ್ಲದೆ ಅಲ್ಲಿನ ಅಲ್ಪ ಸಂಖ್ಯಾತ ಸಿಖ್​ರ ರಕ್ಷಣೆಗೆ ಮುಂದಾಗಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೇಳಿಕೆ ತಿಳಿಸಿದೆ.

ಗುರುನಾನಕ್ ಅವರ ಜನ್ಮಸ್ಥಳ ಹಾಗೂ ಪವಿತ್ರ ನಗರವಾದ ನನಕಾನಾ ಸಾಹಿಬ್‌ನಲ್ಲಿ ಪಾಕಿಸ್ತಾನದ ಅಲ್ಪಸಂಖ್ಯಾತ ಸಿಖ್ ಸಮುದಾಯದ ಸದಸ್ಯರ ಮೇಲಿನ ಹಿಂಸಾಚಾರವನ್ನು ಸಚಿವಾಲಯ ಖಂಡಿಸಿದೆ.

ಅಲ್ಲಿನ ಸಿಖ್ ಸಮುದಾಯದ ಸದಸ್ಯರ ಸುರಕ್ಷತೆಗೆ ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ನಾವು ಪಾಕಿಸ್ತಾನ ಸರ್ಕಾರವನ್ನು ಕೋರುತ್ತೇವೆ ಎಂದು ಮನವಿಯಲ್ಲಿ ಹೇಳಲಾಗಿದೆ.

ಸಿಖ್​ ಧರ್ಮದ ರಾಜಕೀಯ ಮತ್ತು ಧಾರ್ಮಿಕ ಮುಖಂಡರು ಪಾಕಿಸ್ತಾನದ ಅಧ್ಯಕ್ಷ ಇಮ್ರಾನ್​ ಖಾನ್​ ಮಧ್ಯಪ್ರವೇಶಿಸಬೇಕು. ಅಲ್ಲಿನ ಐತಿಹಾಸಿಕ ದೇಗುಲವನ್ನು ಹಾನಿಯಾಗದಂತೆ ರಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ.

ಪಂಜಾಬ್​ ಮುಖ್ಯಮಂತ್ರಿ ಕ್ಯಾಪ್ಟನ್​ ಅಮರಿಂದರ್​ ಸಿಂಗ್​ ಕೂಡ ಈ ಬಗ್ಗೆ ಖಂಡಿಸಿ ಟ್ವೀಟ್​ ಮಾಡಿದ್ದು ಸೂಕ್ತ ಕ್ರಮಕ್ಕೆ ಪಾಕಿಸ್ತಾನ ಅಧ್ಯಕ್ಷರಿಗೆ ಕೋರಿದ್ದಾರೆ.

ಈ ಬಗ್ಗೆ ಉತ್ತರಿಸಲು ಮುಂದಾದ ಪಾಕಿಸ್ತಾನದ ಅಧ್ಯಕ್ಷ ಇಮ್ರಾನ್​ ಖಾನ್​, ಉತ್ತರ ಪ್ರದೇಶದಲ್ಲಿ ಮುಸ್ಲಿಂರ ಮೇಲೆ ದಾಳಿ ನಡೆದಿದೆ ಎನ್ನಲಾದ ಮೂರು ಹಳೆಯ ಫೊಟೋಗಳನ್ನು ಟ್ವೀಟರ್​ನಲ್ಲಿ ಹಂಚಿಕೊಂಡು ನಂತರ ಡಿಲಿಟ್​ ಮಾಡಿದ್ದಾರೆ.

blank

ಈ ಫೊಟೋಗಳು ಹಳೆಯದಾಗಿದ್ದು ಬಾಂಗ್ಲಾ ದೇಶದಲ್ಲಿ ನಡೆದ ಹಿಂಸಾಚಾರದ ಫೋಟೋಗಳು, ಅದನ್ನು ಭಾರತದ ಉತ್ತರ ಪ್ರದೇಶದಲ್ಲಿ ನಡೆದಿತ್ತು ಎಂದು ಇಮ್ರಾನ್​ ಖಾನ್​ ಟ್ವೀಟರ್​ನಲ್ಲಿ ಹಂಚಿಕೊಂಡಿದ್ದು, ಮತ್ತೆ ಅದನ್ನು ಡಿಲಿಟ್​ ಮಾಡಿ ಭಾರಿ ಮುಖಭಂಗ ಅನುಭವಿದ್ದಾರೆ. (ಏಜೆನ್ಸೀಸ್​)

Share This Article

ಪರ್ಫ್ಯೂಮ್ ಬಳಸುವುದರಿಂದ ಉಸಿರಾಟ ಸಮಸ್ಯೆ ಉಂಟಾಗುತ್ತದೆ ಹುಷಾರ್​​!..Perfume Harmful Effects

ಬೆಂಗಳೂರು: ( Perfume Harmful Effects ) ಸುಗಂಧ ದ್ರವ್ಯ ಎಂದರೆ ಹಲವರಿಗೆ ತುಂಬಾ ಇಷ್ಟ.…

ಈ ಸಮಯದಲ್ಲಿ ಯಾವುದೇ ಕಾರಣಕ್ಕೂ ರೀಲ್ಸ್​ ನೋಡ್ಬೇಡಿ… ಗಂಭೀರ ಕಾಯಿಲೆ ಬರುತ್ತೆ ಎಚ್ಚರ! Reels

Reels : ಈ ಮೊದಲು ಜನರ ನೆಚ್ಚಿನ ಸಾಮಾಜಿಕ ಜಾಲತಾಣ ಫೇಸ್‌ಬುಕ್ ಆಗಿತ್ತು, ಈಗ ಇನ್​ಸ್ಟಾಗ್ರಾಂ…

Onion Oil: ನಿಮ್ಮ ಕೂದಲು ದಟ್ಟವಾಗಿ ಬೆಳೆಯಬೇಕೆ? ಈರುಳ್ಳಿ ರಸದಿಂದ ಹೀಗೆ ಮಾಡಿ ನೋಡಿ…

Onion Oil : ಇತ್ತೀಚಿನ ದಿನಗಳಲ್ಲಿ ತಲೆ ಕೂದಲು ಉದುರುವುದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೆಲಸದ…