ನವದೆಹಲಿ: ಕಳೆದ ಕೆಲವು ಸಮಯದಿಂದ ಭಯವನ್ನು ಮೂಡಿಸುತ್ತಲೇ ಬಂದಿರುವ ಮಂಕಿಪಾಕ್ಸ್ಗೆ ಇದೀಗ ಭಾರತದಲ್ಲಿ ಮೊದಲ ಬಲಿಯಾಗಿದೆ ಎನ್ನಲಾಗಿದೆ. ಏಕೆಂದರೆ ಮಂಕಿಪಾಕ್ಸ್ನಂಥ ಸೋಂಕಿನ ಲಕ್ಷಣದಿಂದ ಯುವಕನೊಬ್ಬ ಸಾವಿಗೀಡಾಗಿದ್ದು, ಆ ಕುರಿತು ತನಿಖೆ ನಡೆಸುವಂತೆ ಕೇರಳ ಸರ್ಕಾರ ಆದೇಶಿಸಿದೆ.
ಜಗತ್ತಿನಾದ್ಯಂತ ಮಂಕಿಪಾಕ್ಸ್ ಹರಡುತ್ತಿದ್ದು, ಆತಂಕ ಉಂಟು ಮಾಡಿದೆ. ಈ ಮಧ್ಯೆ ಕೇರಳದ ತ್ರಿಶೂರ್ನಲ್ಲಿ ವಿದೇಶದಿಂದ ಮರಳಿದ್ದ ಯುವಕನೊಬ್ಬ ಮಂಕಿಪಾಕ್ಸ್ ಲಕ್ಷಣಗಳಿಂದ ಬಳಲುತ್ತಿದ್ದು, ಸಾವಿಗೀಡಾಗಿದ್ದಾನೆ. ಈ ವಿಚಾರವಾಗಿ ಮಧ್ಯಪ್ರವೇಶಿಸಿರುವ ರಾಜ್ಯ ಸರ್ಕಾರ, ಹೆಚ್ಚಿನ ತನಿಖೆ ನಡೆಸುವಂತೆ ಆದೇಶಿಸಿದೆ.
ಈ ಸಾವಿನ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ಸಭೆ ನಡೆಸಿ ಮುಂದಿನ ಕ್ರಮಗಳ ಕುರಿತು ಚರ್ಚೆ ನಡೆಸಿದ್ದು, ಆ ಯುವಕನ ಜತೆ ವಿದೇಶದಿಂದ ಮರಳಿದ್ದವರಿಗೆ ಪ್ರತ್ಯೇಕವಾಗಿದ್ದು, ನಿಗಾ ವಹಿಸುವಂತೆ ಮುನ್ನೆಚ್ಚರಿಕೆಯ ಸಂದೇಶ ನೀಡಿದೆ. “ಈ ಯುವಕನಿಗೆ ವಿದೇಶದಲ್ಲಿ ನಡೆಸಿದ್ದ ಪರೀಕ್ಷೆ ಪಾಸಿಟಿವ್ ಬಂದಿತ್ತು. ಈತ ತ್ರಿಶೂರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಈತನ ಸಾವಿನ ಕುರಿತು ಉನ್ನತಮಟ್ಟದ ತನಿಖೆ ನಡೆಸಲಿದ್ದೇವೆ” ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಪ್ರೇಮಿಯೇ ಪ್ರೇಯಸಿಯ ರುಂಡ ಕಡಿದ ಪ್ರಕರಣ; ಕೊಲೆಗೆ ಸಹಕರಿಸಿದ್ದ ತಂದೆ, ಮದ್ವೆ ಮಾಡಿಸಿದ್ದ ತಾಯಿಯ ಬಂಧನ..
ಬುಲೆಟ್ನ ಹಿಂದೊಂದು ನಂಬರ್, ಮುಂದೊಂದು ನಂಬರ್; 29 ಸಾವಿರ ರೂ. ದಂಡ, ಬೈಕ್ ಸವಾರ ಅಂದರ್