ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು (ಡಿ.03) ನಡೆದ ಟಿ20 ಸರಣಿಯ ಐದನೇ ಪಂದ್ಯದಲ್ಲಿ ಆತಿಥೇಯ ಭಾರತ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ 6 ರನ್ಗಳ ಅಂತರದಿಂದ ಭರ್ಜರಿ ಗೆಲುವು ಮೂಲಕ 4-1 ಅಂತರದಿಂದ ಟಿ20 ಸರಣಿಯನ್ನು ಕೈವಶ ಮಾಡಿಕೊಂಡಿತು.
ಟೀಮ್ ಇಂಡಿಯಾ ನೀಡಿದ 160 ರನ್ಗಳ ಗುರಿಬೆನ್ನತ್ತಿ ಆಸೀಸ್ ಪಡೆದ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 154 ರನ್ ಕಲೆ ಹಾಕುವ ಮೂಲಕ 6 ರನ್ಗಳ ಅಂತರಲ್ಲಿ ಸೋಲುಂಡಿತು. ತಂಡದ ಪರ ಬೆನ್ ಮೆಕ್ಡರ್ಮಾಟ್ (54), ಟ್ರಾವಿಸ್ ಹೆಡ್ (28) ಮತ್ತು ಮ್ಯಾಥೀವ್ ವೇಡ್ (22) ರನ್ ಗಳಿಸಿದರು. ಉಳಿದಂತೆ ಯಾವೊಬ್ಬ ಆಟಗಾರನು ಕೂಡ ಹೆಚ್ಚು ಪ್ರಭಾವ ಬೀರಲಿಲ್ಲ.
ಭಾರತದ ಪರ ಮುಕೇಶ್ ಕುಮಾರ್ 3 ವಿಕೆಟ್ ಪಡೆದು ಮಿಂಚಿದರು. ಅರ್ಷದೀಪ್ ಸಿಂಗ್ ಮತ್ತು ರವಿ ಬಿಷ್ಣೋಯ್ ತಲಾ ಎರಡು ಪಡೆದರೆ, ಅಕ್ಷರ್ ಪಟೇಲ್ ಒಂದು ವಿಕೆಟ್ಗೆ ತೃಪ್ತಿಪಟ್ಟುಕೊಂಡರು.
ಇದಕ್ಕೂ ಮುನ್ನ ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಭಾರತ ಶ್ರೇಯಸ್ ಅಯ್ಯರ್ (53 ರನ್ 37 ಎಸೆತ, 5 ಬೌಂಡರಿ, 3 ಸಿಕ್ಸರ್), ಅಕ್ಷರ್ ಪಟೇಲ್ (31), ಯಶಸ್ವಿ ಜೈಸ್ವಾಲ್ (21) ಮತ್ತು ಜಿತೇಶ್ ಶರ್ಮ (24) ಬ್ಯಾಟಿಂಗ್ ನೆರವಿನಿಂದ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 160 ರನ್ ಕಲೆ ಹಾಕಿತು.
ಆಸೀಸ್ ಪರ ಬೆಹೆಂಡ್ರಾಪ್ ಮತ್ತು ದ್ವಾರಶುಯಿಸ್ ತಲಾ ಎರಡು ವಿಕೆಟ್ ಪಡೆದರೆ, ಆ್ಯರುನ್ ಹರ್ಡಿ, ನಾಥನ್ ಎಲಿಸ್ ಮತ್ತು ಟಿ ಸಂಘ ತಲಾ ಒಂದೊಂದು ವಿಕೆಟ್ ಕಬಳಿಸಿದರು.
WHAT. A. MATCH! 🙌
Arshdeep Singh defends 10 in the final over as #TeamIndia win the final T20I and clinch the series 4⃣-1⃣ 👏👏
Scorecard ▶️ https://t.co/CZtLulpqqM#INDvAUS | @IDFCFIRSTBank pic.twitter.com/c132ytok8M
— BCCI (@BCCI) December 3, 2023
ಡಿಕೆಶಿ ನೇತೃತ್ವದಲ್ಲಿ ರಾಜ್ಯಪಾಲರ ಭೇಟಿ: ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ತೆಲಂಗಾಣ ಕಾಂಗ್ರೆಸ್
ಸಿಎಂ ಕೆಸಿಆರ್, ಸಂಭಾವ್ಯ ಸಿಎಂ ರೇವಂತ್ ರೆಡ್ಡಿಗೆ ಸೋಲುಣಿಸಿ ಎಲ್ಲರ ಹುಬ್ಬೇರಿಸಿದ ಬಿಜೆಪಿ ಅಭ್ಯರ್ಥಿ!