ಭಾರತ ಮಹಿಳಾ ಕ್ರಿಕೆಟ್ ತಂಡದ ಇಂಗ್ಲೆಂಡ್ ಪ್ರವಾಸ ರದ್ದು

blank

ನವದೆಹಲಿ: ಕರೊನಾ ಹಾವಳಿಯಿಂದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿಗಳಿಗೆ ಅಡಚಣೆಯಾಗುವುದು ಮತ್ತಷ್ಟು ಮುಂದುವರಿದಿದ್ದು, ಇದೀಗ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಪ್ರಮುಖ ಪ್ರವಾಸವೊಂದು ರದ್ದಾಗಿದೆ. ಸೆಪ್ಟೆಂಬರ್‌ನಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಂಡು ತ್ರಿಕೋನ ಸರಣಿಯಲ್ಲಿ ಆಡುವ ಯೋಜನೆಯನ್ನು ಬಿಸಿಸಿಐ ಕೈಬಿಟ್ಟಿದೆ. ಭಾರತದಲ್ಲಿ ಕರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಇದಕ್ಕೆ ಕಾರಣವಾಗಿದೆ.

blank

‘ಕೋವಿಡ್-19 ಪರಿಸ್ಥಿತಿ ಈಗ ದೇಶದಲ್ಲಿ ಮತ್ತಷ್ಟು ಕಳವಳಕಾರಿಯಾಗಿದೆ. ಹೀಗಾಗಿ ನಮಗೆ ಬೇರೆ ದಾರಿ ಇಲ್ಲದೆ ಭಾರತ ಮಹಿಳಾ ತಂಡದ ಇಂಗ್ಲೆಂಡ್ ಪ್ರವಾಸವನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ. ಈ ಬಗ್ಗೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಗೂ ಕಳೆದ ವಾರ ತಿಳಿಸಿದ್ದೇವೆ. ಹಾಲಿ ಪರಿಸ್ಥಿತಿಯಲ್ಲಿ ನಾವು ಯಾವುದೇ ಶಿಬಿರವನ್ನು ಆಯೋಜಿಸಲು ಸಾಧ್ಯವಾಗದು. ಇಂಗ್ಲೆಂಡ್‌ನಲ್ಲೂ ಶಿಬಿರ ಏರ್ಪಡಿಸುವುದು ಕಷ್ಟಕರ. ಯಾಕೆಂದರೆ ಲಂಡನ್‌ಗೆ ತೆರಳಲು ಯಾವುದೇ ವಿಮಾನಗಳ ಲಭ್ಯತೆಯ ಬಗ್ಗೆಯೂ ಸ್ಪಷ್ಟತೆ ಇಲ್ಲ’ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಇದನ್ನೂ ಓದಿ: PHOTOS |ನತಾಶಾ ಪ್ರೆಗ್ನನ್ಸಿ ಫೋಟೋಶೂಟ್ ಮಾಡಿಸಿದ ಹಾರ್ದಿಕ್​ ಪಾಂಡ್ಯ

‘ನಾವು ಭಾರತದ ಪುರುಷರ ತಂಡದ ಶ್ರೀಲಂಕಾ, ಜಿಂಬಾಬ್ವೆ ಪ್ರವಾಸವನ್ನು ರದ್ದುಗೊಳಿಸಿದ್ದೇವೆ. ಏಷ್ಯಾಕಪ್ ಕೂಡ ರದ್ದುಗೊಂಡಿದೆ. ಈ ಸಮಯದಲ್ಲಿ ಎಲ್ಲರಿಗೂ ಕಷ್ಟವಿದೆ. ನಾವು ಸ್ವಲ್ಪ ತಾಳ್ಮೆಯಿಂದ ಕಾಯುವುದು ಅಗತ್ಯ’ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ. ಮುಂದಿನ ವರ್ಷದ ಮಹಿಳೆಯರ ಏಕದಿನ ವಿಶ್ವಕಪ್‌ಗೆ ಸಿದ್ಧತೆಯ ಅಂಗವಾಗಿ ಆಯೋಜನೆಗೊಂಡಿದ್ದ ಈ ತ್ರಿಕೋನ ಸರಣಿಯಲ್ಲಿ ದಕ್ಷಿಣ ಆಫ್ರಿಕಾ 3ನೇ ತಂಡವಾಗಿದೆ. 24 ಆಟಗಾರ್ತಿಯರ ಇಂಗ್ಲೆಂಡ್ ತಂಡ ಕಳೆದ 4 ವಾರಗಳಿಂದ ಟೂರ್ನಿಗಾಗಿ ಅಭ್ಯಾಸವನ್ನೂ ನಡೆಸುತ್ತಿದೆ. ಭಾರತ ತಂಡ ಹಿಂದೆ ಸರಿದಿರುವುದರಿಂದ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಈಗ ತ್ರಿಕೋನ ಸರಣಿಗೆ ಬದಲಾಗಿ ದಕ್ಷಿಣ ಆಫ್ರಿಕಾ ವಿರುದ್ಧ ದ್ವಿಪಕ್ಷೀಯ ಸರಣಿ ಆಡುವ ನಿರೀಕ್ಷೆ ಇದೆ.

ಮಹಿಳೆಯರ ರಾಷ್ಟ್ರೀಯ ಆಯ್ಕೆ ಸಮಿತಿಗೆ ಹೊಸ ಸದಸ್ಯರ ನೇಮಕ ಇನ್ನಷ್ಟೇ ಆಗಬೇಕಾಗಿದೆ. ಇದು ನಮ್ಮ ಕೆಲಸವನ್ನು ಮತ್ತಷ್ಟು ಕಠಿಣಗೊಳಿಸಿದೆ. ಖಾಲಿಯಾಗಿರುವ 5 ಆಯ್ಕೆಗಾರರ ಸ್ಥಾನಗಳಿಗೆ ಜನವರಿಯಲ್ಲೇ ಅರ್ಜಿ ಆಹ್ವಾನಿಸಲಾಗಿದೆ. ಆದರೆ ನಂತರ ಪ್ರಕ್ರಿಯೆಯನ್ನು ಮುಂದುವರಿಸಲಾಗಿಲ್ಲ. ಲಾಕ್‌ಡೌನ್‌ನಿಂದಾಗಿ ನಂತರ ಎಲ್ಲ ಪ್ರಕ್ರಿಯೆ ಸ್ಥಗಿತಗೊಂಡಿತ್ತು ಎಂದು ಬಿಸಿಸಿಐ ಮೂಲಗಳು ವಿವರಿಸಿವೆ. ಹೇಮಲತಾ ಕಲಾ ನೇತೃತ್ವದ ಹಿಂದಿನ ಆಯ್ಕೆ ಸಮಿತಿಯ ಅವಧಿ, ಈ ವರ್ಷದ ಮಹಿಳೆಯ ಟಿ20 ವಿಶ್ವಕಪ್‌ಗೆ ತಂಡ ಆಯ್ಕೆ ಮಾಡಿದ ಬಳಿಕ ಕೊನೆಗೊಂಡಿತ್ತು.

ಟಿ20 ವಿಶ್ವಕಪ್ ಮುಂದೂಡಿದ ಐಸಿಸಿ; ಐಪಿಎಲ್ ಹಾದಿ ಸುಗಮ…

Share This Article

ಒಣಗಿದ ಮಾವು, ಪೇರಲ ಮತ್ತು ಹಲಸಿನ ಎಲೆಗಳಿಗೆ ಹೆಚ್ಚಿದ ಬೇಡಿಕೆ! ಒಂದು ಪ್ಯಾಕೆಟ್ ಬೆಲೆ 500 ರೂ. dried mango leaves

dried mango leaves : ಹಿಂದೂ ಧರ್ಮದಲ್ಲಿ ಮಾವಿನ ಎಲೆಗಳಿಗೆ ವಿಶೇಷ ಸ್ಥಾನವಿದೆ. ಶುಭ ಸಮಾರಂಭಗಳು…

ಈ ಜ್ಯೂಸ್ ಕುಡಿದರೆ ಸಾಕು.. ತೂಕ ಇಳಿಸಿಕೊಳ್ಳಲು ಬೆವರು ಸುರಿಸಿ ಕಷ್ಟಪಡುವ ಅಗತ್ಯವಿಲ್ಲ! juice

juice: ತೂಕ ಇಳಿಸಿಕೊಳ್ಳಲು ಜನರು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ. ಅವರು ಜಿಮ್‌ನಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ,…

ಪ್ರತಿದಿನ ಸ್ನಾನ ಮಾಡುವ ಮೊದಲು ಇವುಗಳನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.. ಆಗ ನಿಮ್ಮ ಮುಖ ಖಂಡಿತವಾಗಿಯೂ ಸುಂದರವಾಗಿ ಹೊಳೆಯುತ್ತದೆ! Beauty Tips

Beauty Tips : ಮಹಿಳೆಯರು ಸಾಮಾನ್ಯವಾಗಿ ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಕ್ರೀಮ್‌ಗಳನ್ನು ಬಳಸುತ್ತಾರೆ.…