More

    “ಕಡಿಮೆ ಮಾತನಾಡಿ ಹೆಚ್ಚು ಕೆಲಸ ಮಾಡಿ” ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದ್ದು ಯಾರಿಗೆ?

    ನವದೆಹಲಿ: ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸಲು ಭಾರತದ ಸೇನೆ ಸಿದ್ಧವಾಗಿದೆ ಎಂದು ಸೇನೆಯ ನೂತನ ಮುಖ್ಯಸ್ಥ ಜನರಲ್​ ಮನೋಜ್​ ಮುಕುಂದ್​ ನರವಾಣೆ ಅವರು ನೀಡಿದ ಹೇಳಿಕೆಗೆ ಕಾಂಗ್ರೆಸ್​ ನಾಯಕ ಅಧೀರ್​ ರಂಜನ್​ ಚೌಧರಿ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

    ಸೇನಾ ಮುಖ್ಯಸ್ಥರೇ ಕಡಿಮೆ ಮಾತನಾಡಿ, ಹೆಚ್ಚು ಕೆಲಸ ಮಾಡಿ ಎಂದು ಅಧೀರ್​ ರಂಜನ್​ ಚೌಧರಿ ಟ್ವೀಟ್​ ಮೂಲಕ ಜನರಲ್​ ಮನೋಜ್​ ಅವರಿಗೆ ಉತ್ತರಿಸಿದ್ದಾರೆ.

    ಖಾಸಗಿ ಸುದ್ದಿವಾಹಿನಿಗೆ ಸಂದರ್ಶನ ನೀಡಿದ ಜನರಲ್​ ಮನೋಜ್​ ಮುಕುಂದ್​ ನರವಾಣೆ ಅವರು, ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ದೊಡ್ಡದಾಗಿ ಕಾರ್ಯಾಚರಣೆ ನಡೆಸಲು ನಮ್ಮ ಯೋಧರು ಸಿದ್ಧರಾಗಿದ್ದಾರೆ ಎಂದು ಹೇಳಿದ್ದರು.

    ಅವರ ಹೇಳಿಕೆಗೆ ರಂಜನ್​ ಚೌಧರಿ 1994ರಲ್ಲಿ ಸಂಸತ್ತು ಪಾಕ್​ ಆಕ್ರಮಿತ ಕಾಶ್ಮೀರ ಕುರಿತು ಕೈಗೊಂಡ ನಿರ್ಣಯವನ್ನು ಉಲ್ಲೇಖಿಸಿ ಟ್ವೀಟ್​ ಮಾಡಿ ಉತ್ತರಿಸಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts