ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸಲು ಭಾರತದ ಸೇನೆ ಸಿದ್ಧವಾಗಿದೆ ಎಂದು ಸೇನೆಯ ನೂತನ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರು ನೀಡಿದ ಹೇಳಿಕೆಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಸೇನಾ ಮುಖ್ಯಸ್ಥರೇ ಕಡಿಮೆ ಮಾತನಾಡಿ, ಹೆಚ್ಚು ಕೆಲಸ ಮಾಡಿ ಎಂದು ಅಧೀರ್ ರಂಜನ್ ಚೌಧರಿ ಟ್ವೀಟ್ ಮೂಲಕ ಜನರಲ್ ಮನೋಜ್ ಅವರಿಗೆ ಉತ್ತರಿಸಿದ್ದಾರೆ.
ಖಾಸಗಿ ಸುದ್ದಿವಾಹಿನಿಗೆ ಸಂದರ್ಶನ ನೀಡಿದ ಜನರಲ್ ಮನೋಜ್ ಮುಕುಂದ್ ನರವಾಣೆ ಅವರು, ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ದೊಡ್ಡದಾಗಿ ಕಾರ್ಯಾಚರಣೆ ನಡೆಸಲು ನಮ್ಮ ಯೋಧರು ಸಿದ್ಧರಾಗಿದ್ದಾರೆ ಎಂದು ಹೇಳಿದ್ದರು.
ಅವರ ಹೇಳಿಕೆಗೆ ರಂಜನ್ ಚೌಧರಿ 1994ರಲ್ಲಿ ಸಂಸತ್ತು ಪಾಕ್ ಆಕ್ರಮಿತ ಕಾಶ್ಮೀರ ಕುರಿತು ಕೈಗೊಂಡ ನಿರ್ಣಯವನ್ನು ಉಲ್ಲೇಖಿಸಿ ಟ್ವೀಟ್ ಮಾಡಿ ಉತ್ತರಿಸಿದ್ದಾರೆ. (ಏಜೆನ್ಸೀಸ್)