ಕಾಶ್ಮೀರ ಕಣಿವೆಗೆ ನುಸುಳಲು ಯತ್ನಿಸಿದ 9 ಉಗ್ರರ ಹತ್ಯೆ, ಭದ್ರತಾ ಪಡೆಯ ಮೂವರು ಸಿಬ್ಬಂದಿ ಹುತಾತ್ಮ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿ ನಿಯಂತ್ರಣ ರೇಖೆಯ ಬಳಿ ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ 9 ಉಗ್ರರನ್ನು ಹೊಡೆದುರುಳಿಸಿರುವುದಾಗಿ ಭಾರತೀಯ ಸೇನಾಪಡೆ ಮೂಲಗಳು ತಿಳಿಸಿವೆ. ನಾಲ್ವರು ಉಗ್ರರನ್ನು ಶನಿವಾರ ಹತ್ಯೆ ಮಾಡಲಾಗಿದ್ದರೆ, ಭಾನುವಾರ ಐವರು ಉಗ್ರರನ್ನು ಹತ್ಯೆ ಮಾಡಲಾಯಿತು ಎಂದು ಹೇಳಿವೆ. ಇನ್ನೂ ಕಾರ್ಯಾಚರಣೆ ಮುಂದುವರಿದಿದೆ ಎನ್ನಲಾಗಿದೆ. ಕಳೆದ 24 ಗಂಟೆಗಳಲ್ಲಿ ನಡೆದ ಈ ಕಾರ್ಯಾಚರಣೆಗಳಲ್ಲಿ ಭದ್ರತಾ ಪಡೆಯ ಹಲವು ಸಿಬ್ಬಂದಿ ಗಾಯಗೊಂಡಿದ್ದರು. ಅವರೆಲ್ಲರನ್ನೂ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮೂವರು ಯೋಧರು ಭಾನುವಾರ ಹುತಾತ್ಮರಾದರು. … Continue reading ಕಾಶ್ಮೀರ ಕಣಿವೆಗೆ ನುಸುಳಲು ಯತ್ನಿಸಿದ 9 ಉಗ್ರರ ಹತ್ಯೆ, ಭದ್ರತಾ ಪಡೆಯ ಮೂವರು ಸಿಬ್ಬಂದಿ ಹುತಾತ್ಮ