ಸೂಕ್ತ ಚಿಕಿತ್ಸೆ ಪಡೆದರೆ ಕ್ಯಾನ್ಸರ್ ವಾಸಿ; ಡಾ.ಕೆ.ಎನ್.ಮಧುಸೂದನ್

blank

ಗಂಗಾವತಿ: ಸಕಾಲಕ್ಕೆ ಚಿಕಿತ್ಸೆ ಪಡೆದರೆ ಕ್ಯಾನ್ಸರ್ ಗುಣಪಡಿಸಬಹುದು ಎಂದು ಭಾರತೀಯ ವೈದ್ಯಕೀಯ ಸಂಘದ ತಾಲೂಕಾಧ್ಯಕ್ಷ ಡಾ.ಕೆ.ಎನ್.ಮಧುಸೂದನ್ ಹೇಳಿದರು.
ವಿಶ್ವ ಕ್ಯಾನ್ಸರ್ ದಿನ ನಿಮಿತ್ತ ಭಾರತೀಯ ವೈದ್ಯಕೀಯ ಸಂಘ ಮತ್ತು ಮೈತ್ರಿ ವಿಭಾಗದಿಂದ ನಗರದ ಗಾಂಧಿ ವೃತ್ತದಲ್ಲಿ ಶನಿವಾರ ಏರ್ಪಡಿಸಿದ್ದ ಜಾಗೃತಿ ಜಾಥಾದಲ್ಲಿ ಮಾತನಾಡಿದರು.

ಸುಧಾರಿತ ತಂತ್ರಜ್ಞಾನಗಳ ಮೂಲಕ ಕ್ಯಾನ್ಸರ್ ಪತ್ತೆ ಹಚ್ಚಲಾಗುತ್ತಿದ್ದು, ಹುಬ್ಬಳ್ಳಿಯ ತಜ್ಞ ವೈದ್ಯರ ತಂಡ ತಪಾಸಣೆ ನಡೆಸಲಿದೆ. ಶಿಬಿರದಲ್ಲಿ ಸ್ತನ, ಗರ್ಭ ಸೇರಿ ಇತರ ಕ್ಯಾನ್ಸರ್ ತಪಾಸಣೆ ಜತೆಗೆ ಚಿಕಿತ್ಸೆ ಸಲಹೆ ನೀಡಲಾಗುವುದು ಎಂದರು.

ಮೈತ್ರಿ ವಿಭಾಗದ ಅಧ್ಯಕ್ಷೆ ಡಾ.ಸುಲೋಚನಾ ಚಿನಿವಾಲರ್ ಮಾತನಾಡಿ, ಕ್ಯಾನ್ಸರ್ ಬಗ್ಗೆ ಯಾವುದೇ ಭಯ ಬೇಡ. ಚಿಕಿತ್ಸೆ ಮೂಲಕ ಗುಣಪಡಿಸಬಹುದಾಗಿದ್ದು, ಸ್ಥಳೀಯರ ಅನುಕೂಲಕ್ಕಾಗಿ ಏ.2ರಂದು ಐಎಂಎ ಹಾಲ್‌ನಲ್ಲಿ ಉಚಿತ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಜಾಥಾದಲ್ಲಿ ವೈದ್ಯರು ಮತ್ತು ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.


ಉಪವಿಭಾಗ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಈಶ್ವರ ಸವಡಿ, ಪದಾಧಿಕಾರಿಗಳಾದ ಡಾ.ವಿ.ವಿ.ಚಿನಿವಾಲರ್, ಡಾ.ಜಿ.ಶಶಿಧರ್, ಡಾ.ಸತೀಶ್ ರಾಯ್ಕರ್, ಡಾ.ಶರಣಬಸವ ಸಂಕನೂರು, ಡಾ.ಮೇಧಾ ಮಲ್ಲನಗೌಡ, ಡಾ.ಎಸ್.ಜಿ.ಅನಿತಾ, ಡಾ.ಮಧುಸೂದನ್, ಡಾ.ಮಂಜುಳಾ, ಡಾ.ವೀಣಾ ಸತೀಶ್ ಇತರರಿದ್ದರು.

Share This Article

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…

ವೇಜ್​, ನಾನ್​ವೆಜ್ ಖಾದ್ಯ​ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!

Tomato :  ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು  ಕರಿ, ಗ್ರೇವಿ, ಸೂಪ್…