ನವದೆಹಲಿ: ಲಡಾಖ್ನ ಪೂರ್ವಭಾಗದಲ್ಲಿ ಸೋಮವಾರ ನಡೆದ ಭಾರತ ಮತ್ತು ಚೀನಾ ಯೋಧರ ನಡುವಿನ ಘರ್ಷಣೆ ವೇಳೆ ಭಾರತೀಯ ಯೋಧರು ಶಸ್ತ್ರಾಸ್ತ್ರಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗಿದ್ದರು. ಆದರೆ, ನಿಯಮದಂತೆ ಅವನ್ನು ಬಳಸಲಿಲ್ಲ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಗುರುವಾರ ಸ್ಪಷ್ಟಪಡಿಸಿದ್ದಾರೆ.
ಗುರುವಾರದ ಟ್ವೀಟ್ನಲ್ಲಿ ಈ ವಿಷಯ ತಿಳಿಸಿರುವ ಅವರು, ಘರ್ಷಣೆಯ ಸಂದರ್ಭದಲ್ಲಿ ಭಾರತೀಯ ಯೋಧರು ಶಸ್ತ್ರಾಸ್ತ್ರಗಳನ್ನು ಹೊಂದಿರಲಿಲ್ಲ ಎಂಬ ವಿಷಯವಾಗಿ ಸ್ಪಷ್ಟನೆ ನೀಡಿದ್ದು, ಭಾರತೀಯ ಯೋಧರ ಬಳಿ ಶಸ್ತ್ರಾಸ್ತ್ರಗಳಿದ್ದವು. ಆದರೆ, 1996 ಮತ್ತು 2005ರ ಒಪ್ಪಂದದನ್ವಯ ಅವನ್ನು ಬಳಸಲಿಲ್ಲ ಎಂದು ಹೇಳಿದ್ದಾರೆ.
ಲಡಾಖ್ನಲ್ಲಿ ಶಸ್ತ್ರಾಸ್ತ್ರಗಳಿಲ್ಲದೆ ನಮ್ಮ ಯೋಧರನ್ನು ಕಳುಹಿಸಿ, ಅವರು ಹುತಾತ್ಮರಾಗಲು ಕಾರಣವಾಗಿದ್ದು ಏಕೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸರ್ಕಾರವನ್ನು ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಜೈಶಂಕರ್ ಈ ಸ್ಪಷ್ಟನೆ ನೀಡಿದ್ದಾರೆ.
ಭಾರತೀಯ ಯೋಧರ ಶವಗಳ ತಲೆಕಡಿದು ವಿಕೃತಿ, ಲಡಾಖ್ನಲ್ಲಿ ಉದ್ವಿಗ್ನ ಪರಿಸ್ಥಿತಿ