ನವದೆಹಲಿ: ಕರೊನಾ ಸೋಂಕು ದಿನೇದಿನೆ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಆದರೂ ಕೇಂದ್ರ, ರಾಜ್ಯ ಸರ್ಕಾರಗಳು ಜನರಿಗೆ ಧೈರ್ಯ ತುಂಬುತ್ತಿದ್ದಾರೆ. ಭಾರತದಲ್ಲಿ ಕರೊನಾ ನಿಯಂತ್ರಣ ತಪ್ಪಿಲ್ಲ. ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಇದೀಗ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಟ್ವೀಟ್ ಮೂಲಕ ಇನ್ನೊಂದು ಸಮಧಾನಕರ ಸಂಗತಿಯನ್ನು ತಿಳಿಸಿದ್ದಾರೆ.
ದೇಶದಲ್ಲಿ ಕರೊನಾ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವ ಪ್ರಮಾಣ ಶೇ.58ಕ್ಕಿಂತಲೂ ಹೆಚ್ಚಾಗಿದೆ. ಈವರೆಗೆ 3 ಲಕ್ಷಕ್ಕೂ ಹೆಚ್ಚು ಜನರು ಗುಣಮುಖರಾಗಿದ್ದಾರೆ. ಹಾಗೇ ವೈರಸ್ನಿಂದ ಸಾಯುತ್ತಿರುವವರ ಪ್ರಮಾಣ ಕೇವಲ ಶೇ.3 ಎಂದು ಮಾಹಿತಿ ನೀಡಿದ್ದಾರೆ.
ಕರೊನಾ ಸೋಂಕಿತರ ಸಂಖ್ಯೆಯಲ್ಲಿ 19 ದಿನಕ್ಕೊಮ್ಮೆ ದ್ವಿಗುಣವಾಗುತ್ತಿದೆ. ಇದು ಲಾಕ್ಡೌನ್ ಮಾಡುವುದಕ್ಕೂ ಮೂರು ದಿನ ಮೊದಲು ಇದ್ದ ಪ್ರಮಾಣ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚೀನಾ ವಿರುದ್ಧ ಸಮರ ಸಾರಿದ ‘ಕ್ವೀನ್’: ಗಾಂಧೀಜಿಯವರ ಮಾತು ಮರೆತುಬಿಟ್ಟಿರಾ ಎಂದಿದ್ದೇಕೆ ಕಂಗನಾ?
ಕರೊನಿಲ್ ತಡೆಗೆ ಆಯುಷ್ ಇಲಾಖೆ ತಜ್ಞರ ಸಮಿತಿಯಲ್ಲಿರುವ ಮುಸ್ಲಿಮರು ಕಾರಣ? ಇಲ್ಲಿದೆ ನೋಡಿ ವಾಸ್ತವ !