More

    ಸೋಂಕಿತರ ಸಂಖ್ಯೆ 5 ಲಕ್ಷ ದಾಟಿದರೂ ಭಯ ಬೇಡ: ಆರೋಗ್ಯ ಸಚಿವರಿಂದ ಒಂದು ಗುಡ್​ನ್ಯೂಸ್​

    ನವದೆಹಲಿ: ಕರೊನಾ ಸೋಂಕು ದಿನೇದಿನೆ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಆದರೂ ಕೇಂದ್ರ, ರಾಜ್ಯ ಸರ್ಕಾರಗಳು ಜನರಿಗೆ ಧೈರ್ಯ ತುಂಬುತ್ತಿದ್ದಾರೆ. ಭಾರತದಲ್ಲಿ ಕರೊನಾ ನಿಯಂತ್ರಣ ತಪ್ಪಿಲ್ಲ. ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

    ಇದೀಗ ಆರೋಗ್ಯ ಸಚಿವ ಹರ್ಷವರ್ಧನ್​ ಅವರು ಟ್ವೀಟ್​ ಮೂಲಕ ಇನ್ನೊಂದು ಸಮಧಾನಕರ ಸಂಗತಿಯನ್ನು ತಿಳಿಸಿದ್ದಾರೆ.
    ದೇಶದಲ್ಲಿ ಕರೊನಾ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವ ಪ್ರಮಾಣ ಶೇ.58ಕ್ಕಿಂತಲೂ ಹೆಚ್ಚಾಗಿದೆ. ಈವರೆಗೆ 3 ಲಕ್ಷಕ್ಕೂ ಹೆಚ್ಚು ಜನರು ಗುಣಮುಖರಾಗಿದ್ದಾರೆ. ಹಾಗೇ ವೈರಸ್​ನಿಂದ ಸಾಯುತ್ತಿರುವವರ ಪ್ರಮಾಣ ಕೇವಲ ಶೇ.3 ಎಂದು ಮಾಹಿತಿ ನೀಡಿದ್ದಾರೆ.
    ಕರೊನಾ ಸೋಂಕಿತರ ಸಂಖ್ಯೆಯಲ್ಲಿ 19 ದಿನಕ್ಕೊಮ್ಮೆ ದ್ವಿಗುಣವಾಗುತ್ತಿದೆ. ಇದು ಲಾಕ್​ಡೌನ್​ ಮಾಡುವುದಕ್ಕೂ ಮೂರು ದಿನ ಮೊದಲು ಇದ್ದ ಪ್ರಮಾಣ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚೀನಾ ವಿರುದ್ಧ ಸಮರ ಸಾರಿದ ‘ಕ್ವೀನ್​’: ಗಾಂಧೀಜಿಯವರ ಮಾತು ಮರೆತುಬಿಟ್ಟಿರಾ ಎಂದಿದ್ದೇಕೆ ಕಂಗನಾ?

    ಕರೊನಿಲ್​ ತಡೆಗೆ ಆಯುಷ್​ ಇಲಾಖೆ ತಜ್ಞರ ಸಮಿತಿಯಲ್ಲಿರುವ ಮುಸ್ಲಿಮರು ಕಾರಣ? ಇಲ್ಲಿದೆ ನೋಡಿ ವಾಸ್ತವ !

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts