ನವದೆಹಲಿ: ಭಾರತದಲ್ಲಿನ ಕರೊನಾ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ)ಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಮೊದಲನೇ ಅಲೆಗಿಂತ ಎರಡನೇ ಅಲೆ ತುಂಬಾ ಮಾರಣಾಂತಿಕವಾಗಿರಲಿದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.
ಭಾರತದಲ್ಲಿ ಕರೊನಾ ಪ್ರಕರಣಗಳ ಇಳಿಕೆಯ ಕ್ರಮಕ್ಕೆ ಡಬ್ಲ್ಯುಎಚ್ಒ ಸ್ಪಂದಿಸುತ್ತಿದೆ. ಆಕ್ಸಿಜನ್ ಕಾನ್ಸನ್ಟ್ರೇಟರ್ಸ್, ಮೊಬೈಲ್ ಫೀಲ್ಡ್ ಆಸ್ಪತ್ರೆಗಳ ಟೆಂಟ್ಸ್, ಮಾಸ್ಕ್ ಮತ್ತು ಇತರೆ ವೈದ್ಯಕೀಯ ಅಗತ್ಯ ಸಾಮಾಗ್ರಿಗಳನ್ನು ಪೂರೈಸಿದ್ದೇವೆ ಎಂದು ತಿಳಿಸಿದ್ದಾರೆ.
ಭಾರತದ ಅನೇಕ ರಾಜ್ಯಗಳಲ್ಲಿ ಕೋವಿಡ್ ಸಂಖ್ಯೆಗಳ ಏರಿಕೆ ಮತ್ತು ಸಾವಿನ ಸಂಖ್ಯೆ ಇನ್ನು ಮುಂದುವರಿದಿದ್ದು, ಇಡೀ ವಿಶ್ವದಲ್ಲಿ ಭಾರತ ತೀವ್ರ ಕಳವಳಕಾರಿಯಾಗಿಯೇ ಮುಂದುವರಿದಿದೆ ಎಂದರು. ಇಂತಹ ಬಿಕ್ಕಟ್ಟಿನ ಸಮಯದಲ್ಲಿ ಭಾರತವನ್ನು ಬೆಂಬಲಿಸುತ್ತಿರುವ ಪಾಲುದಾರರಿಗೆ ಡಬ್ಲ್ಯುಎಚ್ಒ ಮುಖ್ಯಸ್ಥರು ಧನ್ಯವಾದ ಹೇಳಿದರು.
ಕರೊನಾ ಎರಡನೇ ಅಲೆಯಿಂದ ತತ್ತಿರಿಸಿರುವ ಭಾರತಕ್ಕೆ ಅನೇಕ ರಾಷ್ಟ್ರಗಳು ನೆರವಿನ ಹಸ್ತ ಚಾಚಿದೆ. ಈ ಮಧ್ಯೆ ನಿನ್ನೆ ಒಂದೇ ದಿನ ಮತ್ತೆ 3,43,144 ಕರೊನಾ ಪ್ರಕರಣಗಳು ದೇಶದಲ್ಲಿ ಕಂಡುಬಂದಿದೆ. ಇದರೊಂದಿಗೆ ಒಟ್ಟಾರೆ ಕೋವಿಡ್ ಪ್ರಕರಣಗಳ ಸಂಖ್ಯೆ 2,40,46,809 ಕ್ಕೇರಿದೆ. ಇದುವರೆಗೂ ದೇಶದಲ್ಲಿ 2,62,317 ಮಂದಿ ಕರೊನಾಗೆ ಬಲಿಯಾಗಿದ್ದಾರೆ. (ಏಜೆನ್ಸೀಸ್)
ಸಿಎಂ ಜಗನ್ ಸರ್ಕಾರದ ವಿರುದ್ಧ ಗಂಭೀರ ಆರೋಪ: ವೈಎಸ್ಆರ್ ಕಾಂಗ್ರೆಸ್ ಸಂಸದನ ಬಂಧನ!
ಆಯ್ಕೆ ವಿವಾದದ ಬೆನ್ನಲ್ಲೇ ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಶಿಖಾ, ಶೆಫಾಲಿ ವಾಪಸ್
ಇಲ್ಲಿ ಕಳ್ಳರು ಶವಗಳನ್ನೂ ಬಿಡುತ್ತಿಲ್ಲ; ಕೋವಿಡ್ ಸೋಂಕಿನಿಂದ ಮೃತಪಟ್ಟವರ ಚಿನ್ನಾಭರಣ ಕಳವು!