More

    ಇಂದಿರಾ ಕ್ಯಾಂಟೀನ್ ಪ್ರಯೋಜನ ಪಡೆದುಕೊಳ್ಳಲಿ

    ಹುಕ್ಕೇರಿ: ಬಡ ಮತ್ತು ಮಧ್ಯಮ ವರ್ಗದವರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಊಟೋಪಚಾರ ಒದಗಿಸುವ ನಿಟ್ಟಿನಲ್ಲಿ ಪ್ರಾರಂಭಿಸಲಾದ ಇಂದಿರಾ ಕ್ಯಾಂಟೀನ್ ಪ್ರಯೋಜನವನ್ನು ಎಲ್ಲರೂ ಪಡೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
    ಸ್ಥಳೀಯ ಕೋರ್ಟ್ ಸರ್ಕಲ್ ಬಳಿ ಇರುವ ಹಳೇ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಶನಿವಾರ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್ ಯೋಜನೆ ವಿಸ್ತರಣೆಗೆ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದರು. ಶಾಸಕ ನಿಖಿಲ್ ಕತ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಕಾರ್ಯಪಾಲಕ ಅಭಿಯಂತ ಶೆಂಡೂರೆ, ಪುರಸಭೆ ಮುಖ್ಯಾಧಿಕಾರಿ ಕಿಶೋರ ಬೆಣ್ಣಿ, ಕಂದಾಯ ಅಧಿಕಾರಿ ಡಿ.ಬಿ.ನವಲೆ, ಪ್ರಥಮ ದರ್ಜೆ ಸಹಾಯಕ ಆರ್.ಎ.ಭರಮನ್ನವರ, ಎಂ.ಬಿ.ಗುಡಕೇತರ, ಅಭಿಯಂತ ರಾಜಶೇಖರ ಪಟ್ಟಣಶೆಟ್ಟಿ, ವಕೀಲರ ಸಂಘದ ಅಧ್ಯಕ್ಷ ಅನೀಸ್ ವಂಟಮೂರಿ, ನಿಕಟಪೂರ್ವ ಅಧ್ಯಕ್ಷ ರಾಜೀವ ಚೌಗಲಾ, ಲೋಕೋಪಯೋಗಿ ಎಇಇ ಪ್ರವೀಣ ಮಾಡ್ಯಾಳ, ಅಭಿಯಂತರರಾದ ಪ್ರಭಾಕರ ಕಾಮತ್, ಜಯಂತ ಗುಂಜಟಕರ ಪಾಟೀಲ, ಸಿಪಿಐ ಮಹಾಂತೇಶ ಬಸ್ಸಾಪುರ, ಮುಖಂಡರಾದ ಅಶೋಕ ಪಟ್ಟಣಶೆಟ್ಟಿ, ಸತ್ಯಪ್ಪ ನಾಯಿಕ, ಪರಗೌಡ ಪಾಟೀಲ, ಎ.ಕೆ.ಪಾಟೀಲ, ರಾಚಯ್ಯ ಹಿರೇಮಠ, ಆನಂದ ಗಂಧ, ಇಲಿಯಾಸ್‌ಬೇಗ್ ಇನಾಮದಾರ, ರವೀಂದ್ರ ಜಿಂಡ್ರಾಳಿ, ಕಿರಣಸಿಂಗ ರಜಪೂತ, ರಿಷಭ್ ಪಾಟೀಲ, ಗುರು ಕುಲಕರ್ಣಿ, ರಾಜು ಕುರಂದವಾಡೆ, ರಾಜು ಸಿದ್ನಾಳ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts