More

    ಕಾಂಗ್ರೆಸ್ ಆದರ್ಶ ಎಲ್ಲ ಕಾಲಕ್ಕೂ ಪ್ರಸ್ತುತ

    ಚಿಕ್ಕಮಗಳೂರು: ಕಾಂಗ್ರೆಸ್ ಆದರ್ಶ ಎಲ್ಲ ಕಾಲಕ್ಕೂ ಪ್ರಸ್ತುತ. ಪಕ್ಷ ದೇಶಕ್ಕೆ ನೀಡಿದ ಕೊಡುಗೆಗಳು ಉಳಿದಿವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಅಂಶುಮಂತ್ ಹೇಳಿದರು.

    ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಇಂದಿರಾ ಗಾಂಧಿ 104ನೇ ಜನ್ಮ ದಿನಾಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

    ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ರಾಜಕೀಯ ಪುನರ್ಜನ್ಮ ನೀಡಿದ ಜಿಲ್ಲೆ ಚಿಕ್ಕಮಗಳೂರು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಇಂದಿರಾಗಾಂಧಿ ಅವರ ಪರಿಕಲ್ಪನೆ ಹಾಗೂ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

    ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಎಂ.ಎಲ್.ಮೂರ್ತಿ ಮಾತನಾಡಿ, ಕಾಂಗ್ರೆಸ್ ಯಾವುದೇ ಒಂದು ಧರ್ಮಕ್ಕೆ ಸೀಮಿತವಾಗಿಲ್ಲ. ಆದರೆ ಬಿಜೆಪಿ ಭಾವನಾತ್ಮಕ ವಿಚಾರ ಮುಂದಿಟ್ಟುಕೊಂಡು ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿದೆ ಎಂದು ಟೀಕಿಸಿದರು.

    ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಕೆ.ಮಹಮ್ಮದ್ ಮಾತನಾಡಿ, ಸರ್ವಧರ್ವಿುಯರನ್ನೂ ಸಮಾನತೆಯಿಂದ ಕಂಡವರು ಇಂದಿರಾ ಗಾಂಧಿ. ಕಾಂಗ್ರೆಸ್ ಜಾತ್ಯತೀತವಾಗಿದೆ ಎಂದರು.

    ಜಿಪಂ ಮಾಜಿ ಅಧ್ಯಕ್ಷ ಎ.ಎನ್.ಮಹೇಶ್, ಮುಖಂಡ ಸಿ.ಎನ್.ಅಕ್ಮಲ್, ಬ್ಲಾಕ್ ಅಧ್ಯಕ್ಷ ಮಂಜೇಗೌಡ, ರವೀಶ್ ಬಸಪ್ಪ, ಪವನ್ ಕುಮಾರ್, ವಕ್ತಾರ ರೂಬೆನ್ ಮೊಸಸ್, ಸೇವಾದಳದ ಜಿಲ್ಲಾಧ್ಯಕ್ಷ ಸಿಲ್ವೆಸ್ಟರ್, ಆನಂದ್, ಕಾರ್ವಿುಕ ವಿಭಾಗದ ಅಧ್ಯಕ್ಷ ನಯಾಜ್, ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ಅಧ್ಯಕ್ಷ ಕಾರ್ತಿಕ್ ಚೆಟ್ಟಿಯಾರ್, ಎನ್​ಎಸ್​ಯುುಐ ಅಧ್ಯಕ್ಷ ಆದಿಲ್, ತನೋಜ್, ರಾಮಚಂದ್ರ, ರುಕ್ಸಾನ, ಫಾತಿಮಾ, ಸರೋಜಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts