ಭಯೋತ್ಪಾದನೆ ನಿಲ್ಲುವವರೆಗೂ ಸಿಂಧೂ ಜಲ ಒಪ್ಪಂದ ಅಮಾನತಿನಲ್ಲಿರಲಿದೆ; ಎಸ್ ಜೈಶಂಕರ್| Indus Waters

India - Pak

Indus Waters | ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ನಿರಂತರ ಬೆಂಬಲ ನೀಡುತ್ತಿರುವುದರಿಂದ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಲಾಗಿದೆ ಎಂದು ಜೈಶಂಕರ್ ಮಹತ್ವದ ರಾಜತಾಂತ್ರಿಕ ಹೇಳಿಕೆ ನೀಡಿದ್ದಾರೆ. ಗಡಿಯಾಚೆಗಿನ ಭಯೋತ್ಪಾದನೆ ನಿಲ್ಲುವವರೆಗೂ ಸಿಂಧೂ ಜಲ ಒಪ್ಪಂದವು ಅಮಾನತಿನಲ್ಲಿ ಮುಂದುವರಿಯುತ್ತದೆ ಎಂದು ಜೈಶಂಕರ್ ಹೇಳಿದ್ದಾರೆ.

blank

ಇದನ್ನೂ ಓದಿ : ಜಮ್ಮು, ಕಾಶ್ಮೀರದಲ್ಲಿ ಉಗ್ರನ ಎನ್‌ಕೌಂಟರ್‌; ವಿಡಿಯೋ ಕರೆಯಲ್ಲಿ ಶರಣಾಗುವಂತೆ ಬೇಡಿಕೊಂಡಿದ್ದ ತಾಯಿ| video call before encounter

ಕಾಶ್ಮೀರದ ಬಗ್ಗೆ ಚರ್ಚಿಸಲು ಉಳಿದಿರುವ ಏಕೈಕ ವಿಷಯವೆಂದರೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಭಾರತೀಯ ಪ್ರದೇಶವನ್ನು ಖಾಲಿ ಮಾಡುವುದು, ನಾವು ಆ ಚರ್ಚೆಗೆ ಮುಕ್ತರಾಗಿದ್ದೇವೆ ಎಂದು ಜೈಶಂಕರ್​ ಹೇಳಿದ್ದಾರೆ.

ಆಪರೇಷನ್ ಸಿಂಧೂರ್ ಮತ್ತು ಪಾಕಿಸ್ತಾನದೊಂದಿಗಿನ ಯುದ್ಧ ನಿಲುಗಡೆ ಕುರಿತು ಮಾತನಾಡಿದ ಜೈಶಂಕರ್, ಕದನ ವಿರಾಮಕ್ಕೆ ಯಾರು ಕರೆ ನೀಡಿದ್ದರು ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿದರು. ನಾವು ಪಾಕಿಸ್ತಾನಕ್ಕೆ ಒಂದು ಸಂದೇಶವನ್ನು ಕಳುಹಿಸಿದ್ದೆವು, ನಾವು ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುತ್ತಿದ್ದೇವೆ. ಮೇ 10 ರ ಬೆಳಿಗ್ಗೆ ಅವರಿಗೆ ತೀವ್ರ ಹೊಡೆತ ಬಿದ್ದಾಗ ಉಪಗ್ರಹ ಚಿತ್ರಗಳು ನಾವು ಎಷ್ಟು ಹಾನಿ ಮಾಡಿದ್ದೇವೆ ಮತ್ತು ಎಷ್ಟು ಕಡಿಮೆ ಹಾನಿ ಮಾಡಿದ್ದೇವೆ ಎಂಬುದನ್ನು ತೋರಿಸುತ್ತವೆ. ಗುಂಡಿನ ದಾಳಿಯನ್ನು ನಿಲ್ಲಿಸಲು ಯಾರು ಬಯಸಿದ್ದರು ಎಂಬುದು ಸ್ಪಷ್ಟವಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಚಿತ್ರ ಹಿಂಸೆ ಬಿಟ್ರೆ ಬೇರೇನೂ ಮಾಡಲಿಲ್ಲ; ತಂದೆ ಮಾಡಿದ ಆರೋಪಕ್ಕೆ ಪ್ರತ್ಯುತ್ತರ ಕೊಟ್ಟ ಚೈತ್ರಾ ಕುಂದಾಪುರ| Chitra Kundapura

ಇಸ್ಲಾಮಾಬಾದ್ ಜೊತೆಗಿನ ಚರ್ಚೆಗಳು ಭಯೋತ್ಪಾದನೆಯ ಮೇಲೆ ಮಾತ್ರ ಕೇಂದ್ರೀಕರಿಸುತ್ತವೆ ಮತ್ತು ರಾಜತಾಂತ್ರಿಕ ಸಂಬಂಧಗಳಲ್ಲಿ ಮತ್ತಷ್ಟು ಸಾಮಾನ್ಯ ಸ್ಥಿತಿಗೆ ಬರಲು ಇಸ್ಲಾಮಾಬಾದ್ ಭಯೋತ್ಪಾದಕರ ಮೂಲಸೌಕರ್ಯವನ್ನು ಸ್ಥಗಿತಗೊಳಿಸಬೇಕು ಎಂಬ ಪ್ರಧಾನಿ ನರೇಂದ್ರ ಮೋದಿಯವರ ನಿಲುವನ್ನು ಅವರು ಮತ್ತೆ ಪುನರುಚ್ಚರಿಸಿದರು.

(ಏಜೆನ್ಸೀಸ್)

ಜಮ್ಮು, ಕಾಶ್ಮೀರದಲ್ಲಿ ಉಗ್ರನ ಎನ್‌ಕೌಂಟರ್‌; ವಿಡಿಯೋ ಕರೆಯಲ್ಲಿ ಶರಣಾಗುವಂತೆ ಬೇಡಿಕೊಂಡಿದ್ದ ತಾಯಿ| video call before encounter

Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank