More

    ಪ್ರತಿಭಟನಾಕಾರರು, ಅಧಿಕಾರಿಗಳಿಂದ ಮಾಹಿತಿ

    ಮೈಸೂರು : ಶಾಂತಿಯುತ ಪ್ರತಿಭಟನೆ ಮಾಡುತ್ತಿರುವವರಿಗೆ ತಾಲೂಕು ಕಚೇರಿ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ವಿಭಾಗದ ಪ್ರಭಾರ ಡಿವೈಎಸ್ ಪಿ.ಶಶಿಕಲಾ ಸೋಮವಾರ ಪಟ್ಟಣಕ್ಕೆ ಭೇಟಿ ನೀಡಿ ಧರಣಿನಿರತರು ಮತ್ತು ತಾಲೂಕು ಕಚೇರಿ ಅಧಿಕಾರಿಗಳಿಂದ ಮಾಹಿತಿ ಪಡೆದರು.


    ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ ಹಲವು ದಿನಗಳಿಂದ ಪಟ್ಟಣದ ತಾಲೂಕು ಕಚೇರಿ ಮುಂಭಾಗ ದಲಿತ ಪರ ಸಂಘಟನೆಗಳ ಕಾರ್ಯಕರ್ತರು ಸಿ.ಎಸ್.ಜಗದೀಶ್ ಮತ್ತು ದೊಡ್ಡಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.


    ಆದರೆ ಪ್ರತಿಭಟನಾಕಾರರನ್ನು ಅಲ್ಲಿಂದ ಎಬ್ಬಿಸುವ ಸಲುವಾಗಿ ಕಂದಾಯ ಇಲಾಖೆ ಅಧಿಕಾರಿಗಳು, ಪ್ರತಿಭಟನಾಕಾರರು ಹಾಕಿಕೊಂಡಿದ್ದ ತಾತ್ಕಾಲಿಕ ಗುಡಿಸಲು ಮತ್ತು ಇತರ ವಸ್ತುಗಳನ್ನು ಅಲ್ಲಿಂದ ಕಿತ್ತು ಸುಟ್ಟು ಹಾಕಿದ್ದಾರೆ ಎಂದು ಆರೋಪಿಸಿ ಪ್ರತಿಭಟನಾಕಾರರು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದರು.


    ದೂರಿನ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರ ಬಳಿ ಮಾಹಿತಿ ಪಡೆದ ಪ್ರಭಾರ ಡಿವೈಎಸ್ ಪಿ.ಶಶಿಕಲಾ ನಂತರ ತಾಲೂಕು ಕಚೇರಿಗೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವರವನ್ನು ಪಡೆದರು. ಪತ್ರಿಕೆಗೆ ಮಾಹಿತಿ ನೀಡಿದ ಅವರು, ಘಟನೆ ಕುರಿತು ದೂರು ಬಂದಿದ್ದು, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ವರದಿ ನೀಡುವುದಾಗಿ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts