ಉತ್ತಮ ಸಮಾಜಕ್ಕೆ ಅಂತರಂಗ ಶುದ್ಧಿ ಮುಖ್ಯ

Inner purity is important for a good society.

ಇಳಕಲ್ಲ.(ಗ್ರಾ): ಮನುಷ್ಯ ಧರ್ಮ ಅರಿತು ಬಾಳಬೇಕು ಎಂದು ಉತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳ ಹೇಳಿದರು.
ಬ್ರಾಹ್ಮಣ ಸಮಾಜ ಹಾಗೂ ಬಾಗಲಕೋಟೆಯ ವಿಶ್ವಮಾಧ್ವ ಪರಿಷತ್ ವತಿಯಿಂದ ವೆಂಕಟೇಶ ದೇವಸ್ಥಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಗೀತಾ ಅಭಿಯಾನ ಸಮರ್ಪಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಶ್ರೀಕೃಷ್ಣನು ಭಗವದ್ಗೀತೆಯಲ್ಲಿ ತಿಳಿಸಿದಂತೆ ಅಸುರಿ ಗುಣಗಳನ್ನು ತ್ಯಜಿಸಿ ದೈವಿ ಗುಣಗಳನ್ನು ಹೊಂದಬೇಕು. ಉತ್ತಮ ಸಮಾಜ ನಿರ್ಮಾಣ ಮಾಡಲು ನಮ್ಮ ಅಂತರಂಗ ಶುದ್ಧಗೊಳಿಸಿಕೊಳ್ಳುವ ಅವಶ್ಯಕತೆ ಇದೆ ಎಂದರು.

ಬಂಡು ಕಟ್ಟಿ ಮಾತನಾಡಿದರು. ಡಾ. ಸುಶೀಲ ಸು. ಕಾಖಂಡಕಿ, ಬ್ರಾಹ್ಮಣ ಸಮಾಜದ ಅಧ್ಯಕ್ಷ ಪಾಂಡುರಂಗ ಕುಲಕರ್ಣಿ ಅವರು ಗುರುಗಳಿಗೆ ಪಾದಪೂಜೆ ಸಲ್ಲಿಸಿದರು.

ನಾರಾಯಣಾಚಾರ್ಯ ಪೂಜಾರ, ಹಾಗೂ ಪ್ರವಚನ ಕಾರ್ಯಕ್ರಮಗಳ ಪ್ರಾಯೋಜಕರಾದ ಡಾ. ಅಭಿಜಿತ್ ಗುರುರಾಜ ಕಾಖಂಡಕಿ, ಪ್ರೊ. ರಮೇಶ ಕೆ. ಕುಲಕರ್ಣಿ, ಭಾಸ್ಕರ ಪಾಟೀಲ, ಅಶೋಕ ಗೊಂಬಿ ಅವರನ್ನು ಗೌರವಿಸಲಾಯಿತು.

ಪಂ. ರಘೂತ್ತಮಾಚಾರ್ಯ ಹಾಗೂ ಪಂ. ಬಿಂಧುಮಾಧವಾಚಾರ್ಯ ನಾಗಸಂಪಿಗಿ, ಉತ್ತರಾದಿಮಠ ಸಂಸ್ಥಾನದ ಪ್ರಸ್ತುತ ದಿವಾನರಾದ ಶಶಿ ಆಚಾರ್ಯರು, ಕಾರ್ಕಳ, ಕಾಶೀನಾಥ ದೇಶಪಾಂಡೆ, ಗಿರಿಧರ ದೇಸಾಯಿ ಮತ್ತಿತರರಿದ್ದರು.

Share This Article

ಹುಡುಗಿಯರೇ.. ಬೇಸಿಗೆಯಲ್ಲಿ ಸುಂದರವಾಗಿ ಕಾಣಬೇಕಾದರೆ ಈ ತಪ್ಪುಗಳನ್ನು ಮಾಡಬೇಡಿ! Beauty Tips

Beauty Tips: ಬೇಸಿಗೆ ಸಮೀಪಿಸುತ್ತಿರುವುದರಿಂದ, ಅನೇಕ ಜನರು ತಮ್ಮ ಚರ್ಮವನ್ನು ರಕ್ಷಿಸಲು ಹೆಣಗಾಡುತ್ತಿದ್ದಾರೆ. ಹುಡುಗಿಯರು ಹೊರಗೆ…

ನಿಮಗೆ ಕೂದಲು ಉದುರುವ ಸಮಸ್ಯೆ ಇದೆಯೇ? ಹಾಗಲಕಾಯಿ ರಸವನ್ನು ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ…bitter gourd

bitter gourd : ನಮ್ಮಲ್ಲಿ ಹಲವರಿಗೆ ಹಾಗಲಕಾಯಿ ತಿನ್ನುವುದು ಇಷ್ಟವಾಗುವುದಿಲ್ಲ. ಹಾಗಲಕಾಯಿ ತಿನ್ನಲು ಸ್ವಲ್ಪ ಕಹಿಯಾಗಿದ್ದರೂ,…

ಸುರಕ್ಷಿತ ಪ್ರಯಾಣಕ್ಕಾಗಿ ನಿಮ್ಮ ಕಾರಿನಲ್ಲಿ ಇರಲೇಬೇಕಾದ 6 ವಸ್ತುಗಳು ಯಾವವು ಗೊತ್ತಾ? Vastu Tips

Vastu Tips: ನಮ್ಮ ಮನೆಗಳು ಮತ್ತು ಕಚೇರಿಗಳಿಗೆ ಮಾತ್ರವಲ್ಲದೆ, ನಮ್ಮ ವಾಹನಗಳಿಗೂ ಕೆಲವು ವಾಸ್ತು ನಂಬಿಕೆಗಳಿವೆ.…